ರಾಜ್ಯ ಸರ್ಕಾರ v/s ರಾಜ್ಯಪಾಲರ ನಡುವೆ ಸಂಘರ್ಷ: ಹೀಗೆ ಮಾಡುತ್ತಿದ್ದರೆ ತಮಿಳುನಾಡಿನಂತೆ ಕಾನೂನು ಹೋರಾಟ- ಪ್ರಿಯಾಂಕ್ ಖರ್ಗೆ

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾನಿಲಯ ವಿಧೇಯಕವು ಸ್ಪಷ್ಟೀಕರಣಕ್ಕಾಗಿ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ.
Priyank Kharge
ಪ್ರಿಯಾಂಕ್ ಖರ್ಗೆ
Updated on

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಡುವೆ ಹೊಸದಾದ ಸಂಘರ್ಷ ಉಲ್ಬಣಗೊಳ್ಳುವ ಸಾಧ್ಯತೆಯಿದೆ. ಶಾಸಕಾಂಗ ಅಂಗೀಕರಿಸಿದ ವಿಧೇಯಕಗಳಿಗೆ ರಾಜ್ಯಪಾಲರು ವಾಪಸ್ ಕಳುಹಿಸುತ್ತಿದ್ದರೆ 'ತಮಿಳುನಾಡಿನಂತಹ' ಕಾನೂನು ಹೋರಾಟವನ್ನು ನಡೆಸಬೇಕಾಗುತ್ತದೆ ಎಂದು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ಹೇಳಿದ್ದಾರೆ.

ವಿಧೇಯಕಗಳು ವಾಪಸ್ ಬಂದರೆ ನಾವು ಪರಿಶೀಲಿಸುತ್ತೇವೆ. ಇದರಲ್ಲಿ ಹೊಸದೇನಿದೆ? ಎಂದು ಪ್ರಶ್ನಿಸಿದ ಸಚಿವರು, ತಮಿಳುನಾಡು ಮತ್ತು ಕೇರಳದಲ್ಲಿ ರಾಜ್ಯಪಾಲರ ಕಚೇರಿಯನ್ನು ಬಿಜೆಪಿ ಮತ್ತು ಕೇಶವ ಕೃಪಾ (ರಾಜ್ಯ ಆರ್‌ಎಸ್‌ಎಸ್) ರಾಜ್ಯ ಶಾಖೆಯಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ರಾಜ್ಯಪಾಲರು ವಿಧೇಯಕ ವಾಪಸ್ ಕಳುಹಿಸಿದರೆ ಸರ್ಕಾರ ಏನು ಮಾಡಬಹುದು? ನಾವು ನಮ್ಮ ಸ್ಪಷ್ಟೀಕರಣವನ್ನು ಕಳುಹಿಸುತ್ತೇವೆ. ರಾಜ್ಯಪಾಲರಿಗೆ ಮನವರಿಕೆಯಾಗದಿದ್ದರೆ, ತಮಿಳುನಾಡಿನಂತೆ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಬೇಕಾಗುತ್ತದೆ ಎಂದು ತಿಳಿಸಿದರು.

Priyank Kharge
ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆ: ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ರಾಜ್ಯಪಾಲರಿಂದ ವಾಪಸ್

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾನಿಲಯ ವಿಧೇಯಕವು ಸ್ಪಷ್ಟೀಕರಣಕ್ಕಾಗಿ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ.

ರಾಜಭವನ ಮತ್ತು ಸರ್ಕಾರದ ನಡುವಿನ ವೈಷಮ್ಯ ಯಾವಾಗ ಕೊನೆಗೊಳ್ಳುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್ ಖರ್ಗೆ, ಇದಕ್ಕೆ ಯಾರು ಹೊಣೆ? ನಾವು ಹಾಗೆ ಮಸೂದೆಯನ್ನು ತರಬಹುದೇ? ಅದನ್ನು ಶಾಸಕಾಂಗದಲ್ಲಿ ಚರ್ಚಿಸಿ ಮತದಾನ ಮಾಡಲಾಗುತ್ತದೆ, ರಾಜ್ಯಪಾಲರು ಶಾಸಕಾಂಗದ ನಿರ್ಧಾರಗಳನ್ನು ಉಲ್ಲಂಘಿಸಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದರೆ ಅದು ಸರಿಯೇ? ರಾಜ್ಯಪಾಲರು ಕೇಂದ್ರದ ಮಾತುಗಳನ್ನು ಆಲಿಸುವ ಮೂಲಕ ಪ್ರಜಾಪ್ರಭುತ್ವವನ್ನು ಹತ್ಯೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com