ಮೊಬೈಲ್ ಜಾಮರ್‌ ವಿರೋಧಿಸಿ ಪ್ರತಿಭಟನೆ: ಮಂಗಳೂರು ಜೈಲಿಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರ ಬಂಧನ

ಜೈಲಿನೊಳಗೆ ಅಳವಡಿಸಲಾದ ಮೊಬೈಲ್ ಸಿಗ್ನಲ್ ಜಾಮರ್ ನಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಅದನ್ನು ಸರಿಪಡಿಸಿ ಅಥವಾ ನಿಷ್ಕ್ರಿಯಗೊಳಿಸಿ ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
Updated on

ಮಂಗಳೂರು: ಮಂಗಳೂರಿನಲ್ಲಿ ಜೈಲಿನಲ್ಲಿ ಅಳವಡಿಸಿರುವ ಮೊಬೈಲ್ ಜಾಮರ್‌ನಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರ ಶನಿವಾರ ಪ್ರತಿಭಟನೆ ನಡೆಸಿದರು. ಈ ವೇಳೆ ಜೈಲಿಗೆ ನುಗ್ಗಲು ಯತ್ನಿಸಿದ ಸುಮಾರು 100 ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದ್ದು, ಮಹಿಳಾ ಕಾರ್ಪೊರೇಟರ್‌ ಒಬ್ಬರನ್ನು ಗೋಡೆಗೆ ತಳ್ಳಿದ್ದರಿಂದ ಅವರು ಗಾಯಗೊಂಡಿದ್ದಾರೆ.

ಪೊಲೀಸರ ಪ್ರಕಾರ, ಜೈಲಿನೊಳಗೆ ಅಳವಡಿಸಲಾದ ಮೊಬೈಲ್ ಸಿಗ್ನಲ್ ಜಾಮರ್ ನಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಅದನ್ನು ಸರಿಪಡಿಸಿ ಅಥವಾ ನಿಷ್ಕ್ರಿಯಗೊಳಿಸಿ ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಪಕ್ಷದ ಕಾರ್ಯಕರ್ತ ವಿನಯ್ ಸೋಮಯ್ಯ ಸಾವು ಖಂಡಿಸಿ ಕುಶಾಲನಗರದಲ್ಲಿ ಬಿಜೆಪಿ ಪ್ರತಿಭಟನೆ

ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಕಾರ್ಯಕರ್ತರು ಜೈಲಿನ ಮುಖ್ಯ ಬಾಗಿಲನ್ನು ಮುರಿಯಲು ಯತ್ನಿಸಿದರು ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಪೊಲೀಸರು ಅವರನ್ನು ಜೈಲಿನೊಳಗೆ ಪ್ರವೇಶಿಸದಂತೆ ತಡೆದರು.

"ಜೈಲಿನೊಳಗೆ ಏನೋ ಅಕ್ರಮಗಳು ನಡೆಯುತ್ತಿವೆ. ಮೊಬೈಲ್ ಫೋನ್‌ಗಳನ್ನು ನಿಷೇಧಿಸಿದ ಮೇಲೆ ಜೈಲಿನೊಳಗೆ ಜಾಮರ್ ಅಳವಡಿಸುವ ಅಗತ್ಯವೇನಿದೆ? ಎಂದು ಬಿಜೆಪಿ ಶಾಸಕರು ಪ್ರಶ್ನಿಸಿದ್ದಾರೆ.

"ನಗರದ ಪ್ರಮುಖ ಪ್ರದೇಶದಲ್ಲಿ 3 ಕಿಲೋಮೀಟರ್ ವ್ಯಾಪ್ತಿಯಲ್ಲಿ ಮತ್ತು ಸುತ್ತಮುತ್ತಲಿನ ಸಾಮಾನ್ಯ ಸೆಲ್ಯುಲಾರ್ ದೂರವಾಣಿ ಸಂಪರ್ಕವನ್ನು ಈ ಜಾಮರ್ ತಡೆಯುತ್ತಿದ್ದು, ಇದು ಯುಪಿಐ ಮತ್ತು ಡೆಬಿಟ್ ಕಾರ್ಡ್‌ಗಳ ಮೂಲಕ ಪಾವತಿಗಳಂತಹ ವಹಿವಾಟುಗಳ ಮೇಲೆ ಪರಿಣಾಮ ಬೀರುತ್ತಿದೆ. ಜಿಲ್ಲಾ ನ್ಯಾಯಾಲಯ ಸಹ ಜಾಮರ್ ವ್ಯಾಪ್ತಿಯಲ್ಲಿದ್ದು, ವಕೀಲರು, ನ್ಯಾಯಾಲಯದ ಅಧಿಕಾರಿಗಳು ಮತ್ತು ನ್ಯಾಯಾಧೀಶರು ಸೆಲ್ಯುಲಾರ್ ಫೋನ್‌ಗಳನ್ನು ಬಳಸುವುದನ್ನು ತಡೆಯಲಾಗಿದೆ" ಎಂದು ಅವರು ಹೇಳಿದರು.

“ನಾವು ಬುಧವಾರ ಜೈಲು ಅಧಿಕಾರಿಗಳಿಗೆ ಜಾಮರ್ ಅನ್ನು ನಿಷ್ಕ್ರಿಯಗೊಳಿಸುವಂತೆ ಕೇಳಿಕೊಂಡಿದ್ದೆವು ಮತ್ತು ಜಾಮರ್ ಅನ್ನು ಆಫ್ ಮಾಡಲು ಅವರಿಗೆ ಎರಡು ದಿನಗಳ ಕಾಲಾವಕಾಶ ನೀಡಿದ್ದೆವು. ಆದರೆ ಆಫ್ ಮಾಡಲಿಲ್ಲ. ಹೀಗಾಗಿ ನಾವೇ ಅದನ್ನು ಬಂದ್ ಮಾಡಲು ನಿರ್ಧರಿಸಿದೆವು ಎಂದರು.

ಜೈಲು ಅಧಿಕಾರಿಗಳ ಈ ಗಂಭೀರ ಲೋಪವನ್ನು ಪೊಲೀಸ್ ಮಹಾನಿರ್ದೇಶಕರ(ಕಾರಾಗೃಹಗಳು) ಗಮನಕ್ಕೆ ತರಲಾಗುವುದು ಮತ್ತು ಗೃಹ ಸಚಿವ ಜಿ. ಪರಮೇಶ್ವರ ಅವರ ಗಮನಕ್ಕೂ ತರಲಾಗುವುದು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com