ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ ಎಫ್‌ಐಆರ್, ಶಿಸ್ತು ಕ್ರಮ: ಶಿಕ್ಷಣ ಇಲಾಖೆ ಎಚ್ಚರಿಕೆ

ಬೇಗೂರು ಪೊಲೀಸ್ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಶೌಚಾಲಯ ಸ್ವಚ್ಛಗೊಳಿಸುವಂತೆ ಒತ್ತಾಯಿಸಿದ ಘಟನೆಯ ನಂತರ ಈ ಸುತ್ತೋಲೆ ಹೊರಡಿಸಲಾಗಿದೆ.
Representational image
ಸಂಗ್ರಹ ಚಿತ್ರ
Updated on

ಬೆಂಗಳೂರು: ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಎಚ್ಚರಿಕೆ ನೀಡಿದ್ದು, ಶೌಚಾಲಯ ಸ್ವಚ್ಛಗೊಳಿಸುವ ಕಾರ್ಯದಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸದಂತೆ ನಿರ್ದೇಶಿಸಿದೆ.

ನಿಯಮ ಉಲ್ಲಂಘಿಸಿದರೆ ಕಾರಣವಾದ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸುವುದು ಸೇರಿದಂತೆ ಶಿಸ್ತು ಕ್ರಮಕ್ಕೆ ತೆಗೆದುಕೊಳ್ಳಲಾಗುತ್ತದೆ ಎಂದು ಇಲಾಖೆ ತಿಳಿಸಿದೆ. ಬೇಗೂರು ಪೊಲೀಸ್ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಶೌಚಾಲಯ ಸ್ವಚ್ಛಗೊಳಿಸುವಂತೆ ಒತ್ತಾಯಿಸಿದ ಘಟನೆಯ ನಂತರ ಈ ಸುತ್ತೋಲೆ ಹೊರಡಿಸಲಾಗಿದೆ.

ಮಕ್ಕಳ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಸಾಮಾಜಿಕ ಕಾರ್ಯಕರ್ತ ನಾಗೇಶ್ ದೂರು ದಾಖಲಿಸಿದ ನಂತರ ಮಾರ್ಚ್ 29 ರಂದು ಶಾಲಾ ಮುಖ್ಯೋಪಾಧ್ಯಾಯಿನಿ ಮತ್ತು ದೈಹಿಕ ಶಿಕ್ಷಣ ಶಿಕ್ಷಕರ ವಿರುದ್ಧ ಬಾಲ ನ್ಯಾಯ ಕಾಯ್ದೆಯಡಿ ಪೊಲೀಸ್ ಪ್ರಕರಣ ದಾಖಲಿಸಲಾಗಿದೆ.

2023 ರಲ್ಲಿ ಶಾಲೆಗಳಿಗೆ ಮಕ್ಕಳನ್ನು ಶೌಚಾಲಯ ಸ್ವಚ್ಛಗೊಳಿಸಲು ಬಳಕೆ ಮಾಡಿಕೊಳ್ಳದಂತೆ ಸೂಚಿಸಿ ಸುತ್ತೋಲೆ ಹೊರಡಿಸಿದ್ದರೂ, ಕೆಲವು ಶಾಲೆಗಳು ಆದೇಶವನ್ನು ಉಲ್ಲಂಘಿಸುತ್ತಲೇ ಇವೆ ಎಂದು ಇಲಾಖೆ ಗಮನಿಸಿದೆ.

Representational image
ಬೆಂಗಳೂರು: ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ; ಇಬ್ಬರು ಶಿಕ್ಷಕರು ಅಮಾನತು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com