ರೇಣುಕಸ್ವಾಮಿ ಕೊಲೆ ಪ್ರಕರಣ: ವಿಚಾರಣೆಗೆ ಗೈರಾದ ನಟ ದರ್ಶನ್ ಗೆ ಕೋರ್ಟ್ ತರಾಟೆ

ತೀವ್ರ ಬೆನ್ನು ನೋವಿನಿಂದಾಗಿ ನಟ ದರ್ಶನ್ ಹಾಜರಾಗಲು ಸಾಧ್ಯವಿಲ್ಲ ಎಂದು ದರ್ಶನ್ ಪರ ವಕೀಲರು ತಿಳಿಸಿದ ನಂತರ ನ್ಯಾಯಾಲಯವು ತೀವ್ರ ಅಸಮಾಧಾನ ವ್ಯಕ್ತಪಡಿಸಿತು.
Actor Darshan
ನಟ ದರ್ಶನ್
Updated on

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳು ಸೋಮವಾರ ವಿಚಾರಣೆಗೆ ಹಾಜರಾಗಿದ್ದರು. ಆದರೆ ವಿಚಾರಣೆಗೆ ಹಾಜರಾಗದ ಎರಡನೇ ಆರೋಪಿ ನಟ ದರ್ಶನ್ ತೂಗುದೀಪ ಅವರನ್ನು ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ತರಾಟೆಗೆ ತೆಗೆದುಕೊಂಡಿದೆ.

ತೀವ್ರ ಬೆನ್ನು ನೋವಿನಿಂದಾಗಿ ನಟ ದರ್ಶನ್ ಹಾಜರಾಗಲು ಸಾಧ್ಯವಿಲ್ಲ ಎಂದು ದರ್ಶನ್ ಪರ ವಕೀಲರು ತಿಳಿಸಿದ ನಂತರ ನ್ಯಾಯಾಲಯವು ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

ಪ್ರಕರಣದ ಎಲ್ಲಾ ಆರೋಪಿಗಳು ವೈಯಕ್ತಿಕವಾಗಿ ಹಾಜರಾಗುವುದು ಕಡ್ಡಾಯ ಎಂದು ನ್ಯಾಯಾಧೀಶರು ಪುನರುಚ್ಚರಿಸಿದರು. ಗಣ್ಯ ವ್ಯಕ್ತಿಗಳು ಅನಿಸಿಕೊಂಡವರು ಸೂಕ್ತ ಕಾನೂನಿನ ಕಾರಣವಿಲ್ಲದೆ ವಿನಾಯಿತಿ ಪಡೆಯಬಹುದು ಎಂಬ ಕಲ್ಪನೆ ತಪ್ಪು. ಕೇಸ್ ಇದ್ದಾಗ ಕೋರ್ಟ್ ಗೆ ತಪ್ಪದೇ ಹಾಜರಾಗಬೇಕು. ಗೈರು ಆಗಬಾರದು ಎಂದು ಎಚ್ಚರಿಸಿದರು.

Actor Darshan
ರೇಣುಕಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಜಾಮೀನು ಷರತ್ತು ಸಡಿಲಿಕೆ, ದೇಶಾದ್ಯಂತ ಸಂಚರಿಸಲು ಹೈಕೋರ್ಟ್ ಅನುಮತಿ

ವಿಚಾರಣೆಯ ಸಮಯದಲ್ಲಿ, ದರ್ಶನ್ ಪರ ವಕೀಲರು, ತನಿಖೆಗೆ ಸಂಬಂಧಿಸಿದಂತೆ ಅವರ ನಿವಾಸದ ಮೇಲೆ ದಾಳಿ ನಡೆಸಿದಾಗ ವಶಪಡಿಸಿಕೊಂಡ 75 ಲಕ್ಷ ರೂ. ನಗದನ್ನು ಬಿಡುಗಡೆ ಮಾಡುವಂತೆಯೂ ಕೋರಿದರು.

ಈ ವಿಷಯವನ್ನು ನಿರ್ಧರಿಸುವ ಮೊದಲು ಆದಾಯ ತೆರಿಗೆ ಇಲಾಖೆಯ ಪ್ರತಿಕ್ರಿಯೆಯನ್ನು ಕೇಳುವುದಾಗಿ ನ್ಯಾಯಾಲಯ ಹೇಳಿದೆ ಮತ್ತು ಮುಂದಿನ ವಿಚಾರಣೆಯನ್ನು ಮೇ 20ಕ್ಕೆ ನಿಗದಿಪಡಿಸಿದೆ.

ತನಿಖೆಯ ಸಮಯದಲ್ಲಿ ವಶಪಡಿಸಿಕೊಂಡ ಮೊಬೈಲ್ ಫೋನ್‌ಗಳನ್ನು ಹಿಂತಿರುಗಿಸುವಂತೆ ಕೋರಿ ಪ್ರತಿವಾದಿಯು ಪ್ರತ್ಯೇಕ ಅರ್ಜಿಯನ್ನು ಸಲ್ಲಿಸಿದ್ದಾರೆ.

ಆರೋಪಿಗಳು ಜಾಮೀನು ಪಡೆದರೂ ಪ್ರತಿ ತಿಂಗಳು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂಬ ಷರತ್ತು ಹಿನ್ನೆಲೆಯಲ್ಲಿ ಎಲ್ಲರೂ ಕೋರ್ಟ್​ಗೆ ಹಾಜರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com