ನಕಲಿ ಚಿನ್ನ ಹಗರಣ: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ಬಂಧಿಸಿದ ED

ಡಿಸಿಸಿ ಬ್ಯಾಂಕ್ ಹಗರಣ ಸಂಬಂಧ ಇಡಿ ಅಧಿಕಾರಿಗಳು ನಿನ್ನೆ ಶಿವಮೊಗ್ಗದಲ್ಲಿ ಮಂಜುನಾಥ್ ಗೌಡ ಮನೆ, ಕಚೇರಿ ಸೇರಿದಂತೆ 8 ಕಡೆ ದಾಳಿ ನಡೆಸಿದ್ದರು.
ಮಂಜುನಾಥ್ ಗೌಡ
ಮಂಜುನಾಥ್ ಗೌಡ
Updated on

ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು 62 ಕೋಟಿ ರೂ. ಸಾಲ ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಬುಧವಾರ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್(Shivamogga DCC Bank) ಬ್ಯಾಂಕ್‍ ಅಧ್ಯಕ್ಷ ಮಂಜುನಾಥ್ ಗೌಡ ಅವರನ್ನು ಬಂಧಿಸಿದ್ದಾರೆ.

ಡಿಸಿಸಿ ಬ್ಯಾಂಕ್ ಹಗರಣ ಸಂಬಂಧ ಇಡಿ ಅಧಿಕಾರಿಗಳು ನಿನ್ನೆ ಶಿವಮೊಗ್ಗದಲ್ಲಿ ಮಂಜುನಾಥ್ ಗೌಡ ಮನೆ, ಕಚೇರಿ ಸೇರಿದಂತೆ 8 ಕಡೆ ದಾಳಿ ನಡೆಸಿದ್ದರು. ಅಲ್ಲದೇ ಮಂಜುನಾಥ್ ಅವರನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರಿನ ಚಾಮರಾಜಪೇಟೆಯ ಅಪೆಕ್ಸ್ ಬ್ಯಾಂಕ್ ಅತಿಥಿಗೃಹದಲ್ಲಿ ವಿಚಾರಣೆ ನಡೆಸಿದ್ದರು.

ಹೆಚ್ಚಿನ ವಿಚಾರಣೆಗಾಗಿ ಮಂಜುನಾಥ್ ಗೌಡ ಅವರನ್ನು ಇಂದು ಅಧಿಕೃತವಾಗಿ ಬಂಧಿಸಿ ಕೋರ್ಟ್​​ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ 1ನೇ ಸಿಸಿಹೆಚ್​ ನ್ಯಾಯಾಲಯ​, ಆರೋಪಿಯನ್ನು 14 ದಿನ ಇಡಿ ಕಸ್ಟಡಿಗೆ ನೀಡಿದೆ.

ಮಂಜುನಾಥ್ ಗೌಡ
ನಕಲಿ ಗೋಲ್ಡ್ ಹಗರಣ: ಡಿಸಿಸಿ ಬ್ಯಾಂಕ್ ಮಾಜಿ ಮ್ಯಾನೇಜರ್ ಸೇರಿ ಮೂವರ ಮೇಲೆ ED ದಾಳಿ

ಮಂಜುನಾಥ ಗೌಡಗೆ ಆರೋಗ್ಯ ಸಮಸ್ಯೆ ಹಿನ್ನೆಲೆ ಅಗತ್ಯ ವೈದ್ಯಕೀಯ ಸವಲತ್ತು ನೀಡುವಂತೆ ನ್ಯಾಯಾಲಯ ಸೂಚನೆ ನೀಡಿದೆ ಮತ್ತು ದಿನದಲ್ಲಿ 30 ನಿಮಿಷ ವಕೀಲರಿಂದ ಮಂಜುನಾಥ್ ಗೌಡ ಭೇಟಿಗೆ ಕೋರ್ಟ್​​ ಅವಕಾಶ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com