ಚಿಕ್ಕಮಗಳೂರು: ಮನೆ ಮೇಲೆ KSRTC ಬಸ್ ಬಿದ್ದು 30 ಮಂದಿಗೆ ಗಾಯ

ಬಸ್ ಡಿಕ್ಕಿ ಹೊಡೆದ ಮನೆಯ ನಿವಾಸಿ ಶಾಂತಾ ಕೂಡ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸ್ಥಳೀಯ ನಿವಾಸಿಗಳು ಸಹಾಯ ಮಾಡಿದರು.ಅಪಘಾತಕ್ಕೆ ಅತಿವೇಗವೇ ಕಾರಣ ಎಂದು ಸ್ಥಳೀಯರು ಹೇಳಿದ್ದಾರೆ.
KSRTC bus cashes into house in Chikkamagaluru
ಮನೆ ಮೇಲೆ ಬಿದ್ದ ಬಸ್
Updated on

ಬಾಳೆಹೊನ್ನೂರು (ಚಿಕ್ಕಮಗಳೂರು): ಬೆಂಗಳೂರಿನಿಂದ ಶೃಂಗೇರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮೂರುಗದ್ದೆ ಮತ್ತು ಜಲದುರ್ಗದ ನಡುವೆ ಜಯಪುರ ಬಳಿ ನಿಯಂತ್ರಣ ತಪ್ಪಿ ಮನೆಯ ಮೇಲೆ ಉರುಳಿ ಬಿದ್ದು 30 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಬೆಂಗಳೂರು ಡಿಪೋಗೆ ಸೇರಿದ ಬಸ್‌ನಲ್ಲಿ 45 ಪ್ರಯಾಣಿಕರಿದ್ದರು. ಪುಟ್ಟಪ್ಪ ಪೂಜಾರಿ ಎಂಬವರ ಮನೆಯ ಮೇಲೆ ಬಸ್ ಉರುಳಿ ಬಿದ್ದಿದೆ. ಗಾಯಗೊಂಡ 10 ಮಂದಿಯನ್ನು ಜಯಪುರದ ಸರ್ಕಾರಿ ಆಸ್ಪತ್ರೆಗೆ ಜನರನ್ನು ದಾಖಲಿಸಲಾಗಿದ್ದು, ಚಾಲಕ ವೆಂಕಪ್ಪ ಸೇರಿದಂತೆ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಬಸ್ ಡಿಕ್ಕಿ ಹೊಡೆದ ಮನೆಯ ನಿವಾಸಿ ಶಾಂತಾ ಕೂಡ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸ್ಥಳೀಯ ನಿವಾಸಿಗಳು ಸಹಾಯ ಮಾಡಿದರು.ಅಪಘಾತಕ್ಕೆ ಅತಿವೇಗವೇ ಕಾರಣ ಎಂದು ಸ್ಥಳೀಯರು ಹೇಳಿದ್ದಾರೆ.

ಬಸ್ ತುಂಬಾ ಹಳೆಯದಾಗಿದ್ದು, ಉತ್ತಮವಾಗಿ ನಿರ್ವಹಿಸದೇ ಇರಬಹುದು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಲ್ದಾಣದಲ್ಪ್ರಕರಣ ದಾಖಲಾಗಿದೆ.

KSRTC bus cashes into house in Chikkamagaluru
ಮೊಬೈಲ್ ಸ್ಯಾನಿಟೈಸರ್ ಬಸ್ ‘ಸಾರಿಗೆ ಸಂಜೀವಿನಿ’ಗೆ ಕೆಎಸ್ ಆರ್ ಟಿಸಿ ಚಾಲನೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com