ಡಾ. ರಾಜ್ ಕುಮಾರ್ 19ನೇ ವರ್ಷದ ಪುಣ್ಯಸ್ಮರಣೆ: ಕುಟುಂಬಸ್ಥರಿಂದ ನಮನ

ಕೋಟ್ಯಂತರ ಅಭಿಮಾನಿಗಳಿಂದ ದೇವತಾ ಮನುಷ್ಯ ಎಂದು ಕರೆಸಿಕೊಂಡ ರಾಜ್​ಕುಮಾರ್​​ ಅಭಿಮಾನಿಗಳೆದೆಯಲ್ಲಿ ಸದಾ ಅಜರಾಮರ.
Dr Rajkumar death anniverrsary
ಡಾ ರಾಜ್ ಕುಮಾರ್ ಪುಣ್ಯತಿಥಿ
Updated on

ಬೆಂಗಳೂರು: ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ 19ನೇ ಪುಣ್ಯತಿಥಿ ಇಂದು ಏಪ್ರಿಲ್ 12ರಂದು ಆಗಿದ್ದು, ಕುಟುಂಬಸ್ಥರು, ಅಭಿಮಾನಿಗಳು ಕಂಠೀರವ ಸ್ಟುಡಿಯೊದಲ್ಲಿರುವ ಅವರ ಸ್ಮಾರಕ ಬಳಿ ತೆರಳಿ ಪೂಜೆ ಸಲ್ಲಿಸಿದ್ದಾರೆ. ಬೆಳಗ್ಗೆಯಿಂದಲೇ ಕಂಠೀರವ ಸ್ಟುಡಿಯೊ ಬಳಿ ಸಾವಿರಾರು ಮಂದಿ ಹೋಗಿ ಡಾ ರಾಜ್ ಸಮಾಧಿಗೆ ಹೋಗಿ ನಮನ ಸಲ್ಲಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಡಾ ರಾಜ್ ಕುಮಾರ್ ಮಕ್ಕಳಾದ ಶಿವರಾಜ್ ಕುಮಾರ್ ಅವರ ಕುಟುಂಬ, ರಾಘವೇಂದ್ರ ರಾಜ್ ಕುಮಾರ್ ಅವರ ಮಕ್ಕಳು, ಅಶ್ವಿನಿ ಪುನೀತ್ ರಾಜ್ ಕುಮಾರ್ ಹಾಜರಿದ್ದರು. ತಮ್ಮ ಸಿನಿಮಾಗಳು, ಗಾಯನ, ಅಭಿನಯ, ವ್ಯಕ್ತಿತ್ವದಿಂದ ಇಂದಿಗೂ ಕನ್ನಡಿಗರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿದಿರುವ ಡಾ ರಾಜ್ ಕುಮಾರ್ ಹೆಸರಿನಲ್ಲಿ ಇಂದಿಗೂ ಅನೇಕ ಉತ್ತಮ ಕಾರ್ಯಗಳು ನಡೆಯುತ್ತಿವೆ.

ಸಿನಿಮಾಗಳ ಮೂಲಕ ಮನರಂಜನೆ ಒದಗಿಸಿದ್ದು ಮಾತ್ರವಲ್ಲದೇ, ಕನ್ನಡ ನಾಡಿನ ನೆಲ ಜಲ ಭಾಷೆ ವಿಷಯ ಬಂದಾಗ ಹೋರಾಟದ ಹಾದಿಯನ್ನೂ ಹಿಡಿಯುತ್ತಿದ್ದರು. ನಾಡಿನ ಸಂರಕ್ಷಣೆ ವಿಷಯದಲ್ಲಿ ಸದಾ ಮುಂದಿರುತ್ತಿದ್ದರು. ಕೋಟ್ಯಂತರ ಅಭಿಮಾನಿಗಳಿಂದ ದೇವತಾ ಮನುಷ್ಯ ಎಂದು ಕರೆಸಿಕೊಂಡ ರಾಜ್​ಕುಮಾರ್​​ ಅಭಿಮಾನಿಗಳೆದೆಯಲ್ಲಿ ಸದಾ ಅಜರಾಮರ.

Dr Rajkumar death anniverrsary
ಡಾ ರಾಜ್ ಕುಮಾರ್ 94ನೇ ಜನ್ಮಜಯಂತಿ: ಸಮಾಧಿ ಬಳಿ ಕುಟುಂಬಸ್ಥರ ಪೂಜೆ, ಅಭಿಮಾನಿಗಳಿಂದ ನೆಚ್ಚಿನ ನಟನ ಸ್ಮರಣೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com