ಮಚ್ಚು ಹಿಡಿದು ಶಾಸಕ ಯತ್ನಾಳ್ ಇದ್ದ ವೇದಿಕೆ ಹತ್ತಿದ ವ್ಯಕ್ತಿಯ ಬಂಧನ

ಬಂಧಿತ ವ್ಯಕ್ತಿಯನ್ನು ಶ್ರೀನಿವಾಸ್ ಪೂಜಾರ್(46) ಎಂದು ಗುರುತಿಸಲಾಗಿದ್ದು, ರಾಯಚೂರು ಜಿಲ್ಲೆಯ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
BJP MLA Basanagouda Patil Yatnal
ಬಸನಗೌಡ ಪಾಟೀಲ್ ಯತ್ನಾಳ್
Updated on

ರಾಯಚೂರು: ಮಚ್ಚು ಹಿಡಿದು ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಾತನಾಡುತ್ತಿದ್ದ ವೇದಿಕೆ ಹತ್ತಿ, ತೀವ್ರ ಆತಂಕ ಸೃಷ್ಟಿಸಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಸೋಮವಾರ ಪೊಲೀಸರು ತಿಳಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ಶ್ರೀನಿವಾಸ್ ಪೂಜಾರ್(46) ಎಂದು ಗುರುತಿಸಲಾಗಿದ್ದು, ರಾಯಚೂರು ಜಿಲ್ಲೆಯ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜ್‌ ಆವರಣದಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ಶ್ರೀನಿವಾಸ್ ಅವರು ಮಚ್ಚು ಹಿಡಿದು ಶಾಸಕ ಯತ್ನಾಳ್ ಅವರು ಮಾತನಾಡುತ್ತಿದ್ದ ವೇದಿಕೆ ಹತ್ತಿದ್ದರು. ಈ ವೇಳೆ ಅವರು ಸಂಪೂರ್ಣ ಕುಡಿದಿದ್ದರು. ಅವರು ಮಚ್ಚನ್ನು ಸೊಂಟದಲ್ಲಿ ಇಟ್ಟುಕೊಂಡಿದ್ದರು. ಮದ್ಯದ ಅಮಲಿನಲ್ಲಿ ಅವರು ವೇದಿಕೆಯ ಮೇಲೆ ಹತ್ತಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

BJP MLA Basanagouda Patil Yatnal
ಪ್ರವಾದಿಯನ್ನು ಅವಮಾನಿಸಿದರೆ ಸಹಿಸುವುದಿಲ್ಲ: ಯತ್ನಾಳ್ ಗೆ ಮುಸ್ಲಿಂ ನಾಯಕರ ಎಚ್ಚರಿಕೆ

ಯತ್ನಾಳ್ ಅವರಿಗೆ ಬೆದರಿಕೆ ಇರುವ ಬಗ್ಗೆ ಪೊಲೀಸರಿಗೆ ತಿಳಿದಿದೆ ಮತ್ತು ಈ ಘಟನೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗಿದೆ ಎಂದು ಅವರು ಹೇಳಿದರು.

ನಂತರ, ಶ್ರೀನಿವಾಸ್ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಶ್ರೀನಿವಾಸ್ ಯಾರ ವಿರುದ್ಧವೂ ಹಲ್ಲೆಗೆ ಯತ್ನಿಸಿಲ್ಲ. ಅವರು ಯಾರಿಂದಲೂ ಸಾಲ ಪಡೆದಿದ್ದಾರೆ ಮತ್ತು ಅದನ್ನು ಮರುಪಾವತಿ ಮಾಡಿಲ್ಲ. ಸಾಲ ಕೊಟ್ಟವರ ದಾಳಿಯಿಂದ ತನ್ನನ್ನು ತಾನು ರಕ್ಷಿಸಿಕೊಳ್ಳಲು ಮಚ್ಚನ್ನು ಇಟ್ಟುಕೊಂಡಿದ್ದಾಗಿ ಆರೋಪಿ ಹೇಳಿರುವುದಾಗಿ' ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com