ಶಿವಮೊಗ್ಗ: ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನ; ಗಾಂಜಾ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು

ಆರೋಪಿ ನಝರುಲ್ಲಾ ಕಾಲಿಗೆ ಪೊಲೀಸರ ಗುಂಡು‌ ಹಾರಿಸಿದ್ದಾರೆ. ಗಾಂಜಾ ಮಾರಾಟ ಪ್ರಕರಣದಲ್ಲಿ ಆರೋಪಿ ಆಗಿರುವ ನಝರುಲ್ಲಾ ನನ್ನು ಪೊಲೀಸರು ಬಂಧಿಸಲು ತೆರಳಿದ್ದರು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರೋಪಿ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರೋಪಿ.
Updated on

ಶಿವಮೊಗ್ಗ: ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ.

ಆರೋಪಿ ನಝರುಲ್ಲಾ ಕಾಲಿಗೆ ಪೊಲೀಸರ ಗುಂಡು‌ ಹಾರಿಸಿದ್ದಾರೆ. ಗಾಂಜಾ ಮಾರಾಟ ಪ್ರಕರಣದಲ್ಲಿ ಆರೋಪಿ ಆಗಿರುವ ನಝರುಲ್ಲಾ ನನ್ನು ಪೊಲೀಸರು ಬಂಧಿಸಲು ತೆರಳಿದ್ದರು.

ಈ ವೇಳೆ ಆರೋಪಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ ಎನ್ನಲಾಗಿದ್ದು, ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿ ಕಾಲಿಗೆ ಗುಂಡು ಹೊಡೆದಿದ್ದಾರೆ ಎಂದು ತಿಳಿದು ಬಂದಿದೆ. ಭದ್ರಾವತಿ ಹಳೆ ನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ಮೇಲೆ ಗಾಂಜಾ ಪ್ರಕರಣ ದಾಖಲಾಗಿತ್ತು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರೋಪಿ.
ಹುಬ್ಬಳ್ಳಿ ಬಾಲಕಿ ಹತ್ಯೆ ಕೇಸ್: ಮರಣೋತ್ತರ ಪರೀಕ್ಷೆಯಲ್ಲಿ ಕಾಮುಕನ ಕುಕೃತ್ಯ ಬಯಲು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com