Minister Dinesh Gundurao
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

'ಜಾತಿ ಗಣತಿ ವರದಿಗೆ ನನ್ನ ಸಂಪೂರ್ಣ ಒಪ್ಪಿಗೆಯಿದೆ': ವಿರೋಧದ ನಡುವೆ ಸಚಿವ ದಿನೇಶ್ ಗುಂಡೂರಾವ್

ಜಾತಿ ಗಣತಿ ವರದಿ ಬಗ್ಗೆ ವಿವಿಧ ಜಾತಿ ಸಮುದಾಯಗಳು ತಮ್ಮ ಅಸಮಾಧಾನ ವ್ಯಕ್ತಪಡಿಸಿ, ಅದನ್ನು ದೋಷಪೂರಿತವೆಂದು ಕರೆದಿದ್ದು, ಇದೀಗ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.
Published on

ಬೆಂಗಳೂರು: ರಾಜ್ಯದಲ್ಲಿ ದೊಡ್ಡ ವಿವಾದಕ್ಕೆ ಕಾರಣವಾಗಿರುವ ಜಾತಿ ಗಣತಿ ವರದಿಯನ್ನು ಸಂಪೂರ್ಣವಾಗಿ ಒಪ್ಪಿಕೊಳ್ಳುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬುಧವಾರ ಹೇಳಿದ್ದಾರೆ.

ಜಾತಿ ಗಣತಿ ವರದಿ ಬಗ್ಗೆ ವಿವಿಧ ಜಾತಿ ಸಮುದಾಯಗಳು ತಮ್ಮ ಅಸಮಾಧಾನ ವ್ಯಕ್ತಪಡಿಸಿ, ಅದನ್ನು ದೋಷಪೂರಿತವೆಂದು ಕರೆದಿದ್ದು, ಇದೀಗ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

'ಜಯಪ್ರಕಾಶ್ ಹೆಗ್ಡೆ ಅವರ ನೇತೃತ್ವದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿದ ಸಮೀಕ್ಷಾ ವರದಿಯನ್ನು ನಾನು ಪರಿಶೀಲಿಸಿದ್ದೇನೆ. ಇದು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ನಿಯತಾಂಕಗಳನ್ನು ಆಧರಿಸಿದೆ. ನಾವು ನಿಜವಾಗಿಯೂ ಸಾಮಾಜಿಕ ನ್ಯಾಯ ಮತ್ತು ಸಮಾನ ಬದುಕುವ ಹಕ್ಕುಗಳಲ್ಲಿ ನಂಬಿಕೆ ಇಟ್ಟರೆ ಮತ್ತು ಆ ತತ್ವಗಳಿಗೆ ಬದ್ಧರಾಗಿದ್ದರೆ, ಈ ವರದಿಯನ್ನು ವೈಜ್ಞಾನಿಕ ರೀತಿಯಲ್ಲಿ ವಿಶ್ಲೇಷಿಸುವುದು ಸೂಕ್ತವಾಗಿದೆ. ಈ ವರದಿಯು ತಾರ್ಕಿಕ ಅಂಶಗಳನ್ನು ಒಳಗೊಂಡಿದೆ ಎಂದು ನಾನು ಒತ್ತಿ ಹೇಳಲು ಬಯಸುತ್ತೇನೆ' ಎಂದು ಹೇಳಿದರು.

'ಆಯೋಗವು ಸಲ್ಲಿಸಿದ ವರದಿಯನ್ನು ನಾನು ಸಂಪೂರ್ಣವಾಗಿ ಒಪ್ಪುತ್ತೇನೆ. ವರದಿಯನ್ನು ಸಂಪುಟದ ಮುಂದೆ ಮಂಡಿಸಲಾಗುವುದು. ಒಮ್ಮೆ ಸಂಪುಟ ವರದಿಯನ್ನು ಅನುಮೋದಿಸಿದರೆ, ವರದಿಯ ನ್ಯೂನತೆಗಳು ಮತ್ತು ಅದರ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಮುಕ್ತ ಮತ್ತು ನ್ಯಾಯಯುತ ಚರ್ಚೆಗೆ ದಾರಿ ಮಾಡಿಕೊಡಬಹುದು' ಎಂದು ಸಚಿವರು ಹೇಳಿದರು.

Minister Dinesh Gundurao
ಜಾತಿ ಗಣತಿ ವರದಿ: ಸಚಿವ ಸಂಪುಟ ಚರ್ಚೆಯ ನಂತರ ಮಾತನಾಡುತ್ತೇನೆ, ಅಲ್ಲೀವರೆಗೂ ಪ್ರತಿಕ್ರಿಯೆ ನೀಡಲ್ಲ- ಸಿದ್ದರಾಮಯ್ಯ

'ಆಯೋಗವು ಮಾಡಿದ ಕೆಲವು ಶಿಫಾರಸುಗಳನ್ನು ನಾನು ಗಮನಿಸಿದ್ದೇನೆ. ಈ ಅಂಶಗಳಿಂದ ಯಾವುದೇ ಸಮುದಾಯವು ಅತೃಪ್ತರಾಗಲು ಯಾವುದೇ ಕಾರಣವಿಲ್ಲ. ಈ ಅಂಶಗಳು ಯಾವುದೇ ಸಮುದಾಯವನ್ನು ನಿರ್ಲಕ್ಷಿಸುವುದಿಲ್ಲ ಅಥವಾ ಬದಿಗಿಡುವುದಿಲ್ಲ ಎಂಬುದು ನನ್ನ ನಂಬಿಕೆ. ಕೆಲವು ವ್ಯಕ್ತಿಗಳು ವರದಿಯನ್ನು ಓದದೆಯೇ ಸಾರ್ವಜನಿಕರನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ' ಎಂದು ಅವರು ಅಭಿಪ್ರಾಯಪಟ್ಟರು.

'ಆದ್ದರಿಂದ, ಈ ಹಂತದಲ್ಲಿ ಯಾವುದೇ ತೀರ್ಮಾನಕ್ಕೆ ಬರಬೇಡಿ ಎಂದು ನಾನು ಜನರಲ್ಲಿ ಮನವಿ ಮಾಡುತ್ತೇನೆ. ಅನಗತ್ಯ ಗೊಂದಲ ಸೃಷ್ಟಿಸಬೇಡಿ. ಮೊದಲು ವರದಿಯನ್ನು ಓದಿ ನಂತರ ಚರ್ಚೆಗೆ ನಮ್ಮ ಮನಸ್ಸನ್ನು ತೆರೆದಿಡೋಣ. ವರದಿಯನ್ನು ಪೂರ್ಣವಾಗಿ ಓದದೆ ಅವೈಜ್ಞಾನಿಕ ಎಂದು ಕರೆಯುವುದು ಆತುರದ ನಿರ್ಧಾರ' ಎಂದು ಅವರು ಹೇಳಿದರು.

ಸಚಿವ ದಿನೇಶ್ ಗುಂಡೂರಾವ್ ಅವರು ಬ್ರಾಹ್ಮಣ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

Minister Dinesh Gundurao
ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com