ಜಾತಿ ಜನಗಣತಿ ವರದಿ ವಿರುದ್ಧ ಲಿಂಗಾಯತರು-ಒಕ್ಕಲಿಗರಿಂದ ಒಗ್ಗಟ್ಟಿನ ಹೋರಾಟ: ಶಾಮನೂರು ಶಿವಶಂಕರಪ್ಪ

ಜಾತಿ ಗಣತಿ ವಿರುದ್ಧ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ವೀರಶೈವ ಲಿಂಗಾಯತರನ್ನು ಹಾಗು ಒಕ್ಕಲಿಗರನ್ನು ಎದುರಾಕಿಕೊಂಡು ರಾಜ್ಯಭಾರ ಮಾಡೋಕೆ ಆಗುತ್ತದೆಯೇ.
ಶಾಮನೂರು ಶಿವಶಂಕರಪ್ಪ
ಶಾಮನೂರು ಶಿವಶಂಕರಪ್ಪ
Updated on

ದಾವಣಗೆರೆ: ಜಾತಿ ಜನಗಣತಿ ವರದಿ ವಿರುದ್ಧ ಲಿಂಗಾಯತರು ಹಾಗೂ ಒಕ್ಕಲಿಗರು ಒಗ್ಗಟ್ಟಿನಿಂದ ಹೋರಾಟ ನಡೆಸಲಿದ್ದಾರೆಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಅಧ್ಯಕ್ಷ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ಬುಧವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವಿರುದ್ಧ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ವೀರಶೈವ ಲಿಂಗಾಯತರನ್ನು ಹಾಗು ಒಕ್ಕಲಿಗರನ್ನು ಎದುರಾಕಿಕೊಂಡು ರಾಜ್ಯಭಾರ ಮಾಡೋಕೆ ಆಗುತ್ತದೆಯೇ ಎಂದು ಸವಾಲು ಹಾಕಿದರು,

ಸರ್ಕಾರ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡುವುದಾಗಿ ಹೇಳುತ್ತಿದೆ. ಆದರೆ, ಮಾಡುತ್ತಿಲ್ಲ. ನಮ್ಮ ಪ್ರಕಾರ ರಾಜ್ಯದಲ್ಲಿ ವೀರಶೈವ ಲಿಂಗಾಯತರ ಸಂಖ್ಯೆ ಅಧಿಕವಾಗಿದೆ. ಎರಡನೇ ಸ್ಥಾನದಲ್ಲಿ ಒಕ್ಕಲಿಗ ಸಮುದಾಯವಿದೆ. ಜಾತಿ ಜನಗಣತಿ ವರದಿ ಬಿಡುಗಡೆ ಮಾಡುವುದಾಗಿ ಸರ್ಕಾರ ಸುಮ್ಮನೆ ಹೇಳುತ್ತಿದೆ. ಒಂದೊಮ್ಮೆ ಬಿಡುಗಡೆ ಮಾಡಿದರೆ ಒಕ್ಕಲಿಗರು ಮತ್ತು ಲಿಂಗಾಯತರು ಒಗ್ಗೂಡಿ ಹೋರಾಟ ಮಾಡುತ್ತೇವೆಂದು ತಿಳಿಸಿದರು.

10 ವರ್ಷಗಳ ಹಿಂದೆ ನಡೆಸಿದ ಸಮೀಕ್ಷೆಯು ಅವೈಜ್ಞಾನಿಕವಾಗಿದ್ದು, ಒಂದು ಸರ್ಕಾರ ವರದಿಯನ್ನು ಜಾರಿಗೆ ತಂದಿದ್ದೇ ಆದರೆ, ಹಿನ್ನಡೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇದು ಕೇವಲ ನನ್ನ ಅಭಿಪ್ರಾಯವಷ್ಟೇ ಅಲ್ಲ, ಇತರ ಅನೇಕರ ಅಭಿಪ್ರಾಯವೂ ಆಗಿದೆ. ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ವರದಿಯ ಬಗ್ಗೆ ಚರ್ಚಿಸಲು ಸರ್ಕಾರ ಯೋಜಿಸುತ್ತಿದೆ. ಸರ್ಕಾರ ಚರ್ಚೆ ಮಾಡಲಿ ಸಾಮಾಜಿಕ-ಆರ್ಥಿಕ-ಶೈಕ್ಷಣಿಕ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲಿ ಎಂದು ಹೇಳಿದರು.

ಶಾಮನೂರು ಶಿವಶಂಕರಪ್ಪ
ಜಾತಿ ಗಣತಿ ಕ್ಲೈಮ್ಯಾಕ್ಸ್‌: ಇಂದು ಮಹತ್ವದ ಸಚಿವ ಸಂಪುಟ ಸಭೆ; ಎಲ್ಲರ ಚಿತ್ತ ಸರ್ಕಾರದತ್ತ; ಸಂಪುಟ ಉಪಸಮಿತಿ/ತಜ್ಞರ ಸಮಿತಿ ರಚನೆ ಸಾಧ್ಯತೆ!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com