
ರಾಯಚೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಶುಕ್ರವಾರ ರಾಯಚೂರು ಜಿಲ್ಲೆಯಲ್ಲೂ ಹಲವು ಕಡೆ ಭಾರಿ ಗಾಳಿ, ಗುಡುಗು, ಸಿಡಿಲು ಸಹಿತ ಮಳೆ ಆಗುವ ಮೂಲಕ ಬಿಸಿಲಿಗೆ ಕಾದು ಕೆಂಡದಂತಾಗಿದ್ದ ಇಳೆ ತಂಪಾಗುವಂತೆ ಮಾಡಿದೆ.
ಇಂದು ಮಧ್ಯಾಹ್ನ 3:20 ರಿಂದ 4 ಗಂಟೆಯವರೆಗೆ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಮಳೆಯಾಗಿದೆ. ನಗರದಲ್ಲಿ ವರ್ಷದ ಮೊದಲ ಮಳೆ ಸುರಿಯಿತು. ಮಸ್ಕಿ, ಹಟ್ಟಿ ಚಿನ್ನದ ಗಣಿ, ಲಿಂಗಸುಗೂರಲ್ಲಿ ಸಾಧಾರಣ ಮಳೆಯಾಗಿದೆ.
ಇನ್ನು ರಾಯಚೂರು ತಾಲ್ಲೂಕಿನ ಉಡಮಗಲ್ ಹಾಗೂ ಮರ್ಚಾಟ್ಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಉಡಮಗಲ್ ನ ಮಲ್ಲಮ್ಮ(50) ಹಾಗೂ ಮರ್ಚಾಟ್ಹಾಳದ ಹನುಮಂತ(55) ಎಂದು ಗುರುತಿಸಲಾಗಿದೆ.
ಮಲ್ಲಮ್ಮ ಅವರು ಗ್ರಾಮದ ಹೊರವಲಯದಲ್ಲಿ ಕುರಿ ಮೇಯಿಸಲು ಹೋದಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.
Advertisement