
ಹಾವೇರಿ: ಮುಸ್ಲಿಂ ಯುವಕನ ಕಿರುಕುಳಕ್ಕೆ ಬೇಸತ್ತು ಬಿಸಿಎ ಓದುತ್ತಿದ್ದ ದಲಿತ ಯುವತಿ ಶಿಲ್ಪಾ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದ್ದು ಶಿಗ್ಗಾಂವಿಯ ಫರ್ನಿಚರ್ ಅಂಗಡಿಯೊಂದರ ಮಾಲೀಕ ರಂಜಾನ್ ನದಾಫ್ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ. ಈ ಸಂಬಂಧ ನದಾಫ್ ನನ್ನು ಬಂಧಿಸುವಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.
ಬಿಸಿಎ ಓದುತ್ತಿದ್ದ 22 ವರ್ಷದ ಶಿಲ್ಪಾ ಶಿಗ್ಗಾಂವಿಯ ನವೀನ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಇನ್ನು ನವೀನ್ ಆರೋಪಿ ರಂಜಾನ್ ನದಾಫ್ನ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು. ನವೀನ್ ವಿರುದ್ಧ ಕಳ್ಳತನ ಆರೋಪ ಮಾಡಿದ್ದ ನದಾಫ್, ನವೀನ್ ಮೊಬೈಲ್ ಅನ್ನು ಕಸಿದುಕೊಂಡಿದ್ದನು. ನಂತರ ರಂಜಾನ್ ನದಾಫ್, ನವೀನ್ ಮತ್ತು ಶಿಲ್ಪಾರ ಚಾಟ್ ಮೆಸೆಜ್ಗಳನ್ನು ನೋಡಿದ್ದು ಶಿಲ್ಪಾ ಮೊಬೈಲ್ ನಂಬರ್ ತೆಗೆದುಕೊಂಡು ಕಿರುಕುಳ ನೀಡಲು ಪ್ರಾರಂಭಿಸಿದ್ದಾನೆ. ಹೀಗಾಗಿ ಶಿಲ್ಪಾ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಹೇಳಲಾಗುತ್ತಿದೆ. ಕಳೆದ ವಾರ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Advertisement