BJPಗೆ ಮಾಜಿ ಶಾಸಕ AT Ramaswamy ಗುಡ್ ಬೈ!

ಕಳೆದ ವಿಧಾನಸಭೆ ಚುನಾವಣೆ ವೇಳೆ ಎಟಿ ರಾಮಸ್ವಾಮಿ ಜೆಡಿಎಸ್ (JDS) ಬಿಟ್ಟು ಬಿಜೆಪಿ ಸೇರ್ಪಡೆಯಾಗಿದ್ದರು. ಜೆಡಿಎಸ್ ಜತೆ ಮೈತ್ರಿ ಬಳಿಕ ಅಸಮಾಧಾನಗೊಂಡಿದ್ದರು.
BJPಗೆ ಮಾಜಿ ಶಾಸಕ AT Ramaswamy ಗುಡ್ ಬೈ!
Updated on

ಬೆಂಗಳೂರು: ಮಾಜಿ ಶಾಸಕ ಎಟಿ ರಾಮಸ್ವಾಮಿ (AT Ramaswamy) ಬಿಜೆಪಿಗೆ (BJP) ರಾಜೀನಾಮೆ ನೀಡಿದ್ದಾರೆ. ರಾಜ್ಯಾಧ್ಯಕ್ಷ ವಿಜಯೇಂದ್ರಗೆ (BY Vijayendra) ರಾಜೀನಾಮೆ ಪತ್ರ ಬರೆದು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿರುವುದನ್ನು ತಿಳಿಸಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆ ವೇಳೆ ಎಟಿ ರಾಮಸ್ವಾಮಿ ಜೆಡಿಎಸ್ (JDS) ಬಿಟ್ಟು ಬಿಜೆಪಿ ಸೇರ್ಪಡೆಯಾಗಿದ್ದರು. ಜೆಡಿಎಸ್ ಜತೆ ಮೈತ್ರಿ ಬಳಿಕ ಅಸಮಾಧಾನಗೊಂಡಿದ್ದರು.

BJPಗೆ ಮಾಜಿ ಶಾಸಕ AT Ramaswamy ಗುಡ್ ಬೈ!
ನಾನು ಟಿಕೆಟ್ ಗಾಗಿ ಬಿಜೆಪಿ ಸೇರಿಲ್ಲ: ಮಾಜಿ ಶಾಸಕ ಎಟಿ ರಾಮಸ್ವಾಮಿ

ರಾಜೀನಾಮೆ ಪತ್ರದಲ್ಲಿ ATR ಹೇಳಿದ್ದೇನು?

ವಿಶ್ವ ತಾಪಮಾನ ವಿಪರೀತ ಏರಿಕೆಯಿಂದಾಗಿ ಹವಾಮಾನದ ಅಸಮತೋಲನ ಉಂಟಾಗಿದೆ. ಇದರಿಂದ ನೆರೆ, ಬರ, ಚಂಡಮಾರುತ, ಭೂಕಂಪನಗಳು ಸೃಷ್ಟಿಯಾಗುತ್ತಿವೆ. ನಾವು ಕುಡಿಯುವ ನೀರು, ಉಸಿರಾಡುವ ಗಾಳಿ, ಸೇವಿಸುವ ಆಹಾರ ವಿಷಪೂರಿತವಾಗಿವೆ.

ಬೆಟ್ಟ, ಗುಡ್ಡ, ಅರಣ್ಯಗಳ ನಾಶದಿಂದ ನದಿ, ತೊರೆಗಳೂ ಬತ್ತಿ ಹೋಗಿವೆ. ಅಂತರ್ಜಲ ಕುಸಿದಿದೆ. ಜೀವ ಸಂಕುಲಗಳಿಗೆ ಸಂಕಷ್ಟ ಬಂದೊದಗಿದೆ. ಈ ಹೊತ್ತಿನಲ್ಲಾದರೂ ನಾವು ಜನರಲ್ಲಿ ಜಾಗೃತಿ ಮೂಡಿಸಿ ಪರಿಸರ ಸಂರಕ್ಷಣೆ ಕಾರ್ಯ ಮಾಡಬೇಕಾಗಿದೆ.

ಪರಿಸರ ಉಳಿದರೆ ಜೀವ ಸಂಕುಲಗಳೂ ಉಳಿಯುತ್ತವೆ. ಈ ಸನ್ನಿವೇಶದಲ್ಲಿ ರಾಜಕಾರಣಕ್ಕಿಂತ ಪರಿಸರ ಸಂರಕ್ಷಣೆ ಅತ್ಯಂತ ಮಹತ್ವವೆಂದು ಭಾವಿಸಿರುತ್ತೇನೆ. ಆದ್ದರಿಂದ ನಾನು ಭಾರತೀಯ ಜನತಾ ಪಕ್ಷದ ಸದಸ್ಯತ್ವಕ್ಕೆ ರಾಜಿನಾಮೆ ನೀಡುತ್ತಿದ್ದೇನೆ. ತಾವೆಲ್ಲರೂ ತೋರಿದ ಪ್ರೀತಿ ವಿಶ್ವಾಸಕ್ಕೆ ಕೃತಜ್ಞತೆಗಳು ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com