ಕಾರವಾರ: ಚಾಕುವಿನಿಂದ ಇರಿದು ಮಾಜಿ ನಗರಸಭೆ ಸದಸ್ಯನ ಹತ್ಯೆ!

ವೈಯಕ್ತಿಕ ದ್ವೇಷಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಕಾರವಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ
Satish Kolankar
ಮಾಜಿ ನಗರಸಭೆ ಸದಸ್ಯ ಸತೀಶ್ ಕೋಳಂಕರ್
Updated on

ಕಾರವಾರ: ಮಾಜಿ ನಗರಸಭೆ ಸದಸ್ಯ ಸತೀಶ್ ಕೋಳಂಕರ್ (62) ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬಿಎಸ್​ಎನ್​ಎಲ್​ ಕಚೇರಿ ಬಳಿ‌ ನಡೆದಿದೆ.

ಇಂದು ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಇಬ್ಬರು ದುಷ್ಕರ್ಮಿಗಳು ಸತೀಶ್ ಅವರ ಮೇಲೆ ಹಲ್ಲೆ ನಡೆಸಿದೆ. ಬಳಿಕ ಚಾಕುವಿನಿಂದ ಎದೆಗೆ ಇರಿದು ಹತ್ಯೆ ಮಾಡಿದೆ. ತಕ್ಷಣ ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ವೈಯಕ್ತಿಕ ದ್ವೇಷಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಕಾರವಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ವ್ಯಾವಹಾರಿಕ ವಿಚಾರದ ದ್ವೇಷದಿಂದ ಸತೀಶ್ ಅವರ ಹತ್ಯೆಯಾಗಿರುವ ಶಂಕೆಯಿದೆ. ಅವರ ವಿರುದ್ಧ ಕಾರವಾರ ನಗರ ಠಾಣೆಯಲ್ಲಿ 9ಕ್ಕೂ ಹೆಚ್ಚು ಪ್ರಕರಣಗಳಿವೆ. ಅವರನ್ನು ರೌಡಿ ಶೀಟರ್ ಪಟ್ಟಿಗೆ ಸೇರಿಸಲಾಗಿತ್ತು. ಹತ್ತು ದಿನಗಳ ಹಿಂದೆ ನಗರದ ಹೋಟೆಲ್ ಒಂದರಲ್ಲಿ ಹಣಕಾಸಿನ ವಿಚಾರವಾಗಿ ಗಲಾಟೆ ನಡೆದಿತ್ತು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ನಾರಾಯಣ ತಿಳಿಸಿದ್ದಾರೆ.

Satish Kolankar
ವಿವಾಹಿತ ಮಹಿಳೆಗೆ ಬೆದರಿಕೆ, ಒಂದು ವರ್ಷದಿಂದ ಅತ್ಯಾಚಾರ: ಹಾವೇರಿ ನಗರಸಭೆ ಮಾಜಿ ಸದಸ್ಯ ಬಂಧನ

ಇದು ಒಂದು ವೈಯಕ್ತಿಕ ಮತ್ತು ಸಾಲದ ವ್ಯವಹಾರಕ್ಕೆ ಆದ ಕೊಲೆಯಾಗಿದೆ. ಆರೋಪಿಗಳ ಮಾಹಿತಿ ದೊರೆತಿದ್ದು, ಶೀಘ್ರದಲ್ಲಿ ಬಂಧಿಸುತ್ತೇವೆ. ಕಾರವಾರದಲ್ಲಿ ಕಾನೂನು ಸುವ್ಯವಸ್ಥೆ ಹತೋಟಿಯಲ್ಲಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com