BMIC ಯೋಜನೆ: ಏಳು ಸಚಿವರನ್ನೊಳಗೊಂಡ ಸಂಪುಟದ ಉಪ ಸಮಿತಿ ರಚನೆ

ಈ ಸಮಿತಿಯು ಕಾನೂನು ತಜ್ಞರು ಹಾಗೂ ವಿಷಯದ ಪರಿಣಿತರೊಂದಿಗೆ ಚರ್ಚಿಸಿ ಕಾನೂನಾತ್ಮಕವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಎರಡು ತಿಂಗಳೊಳಗೆ ತನ್ನ ವರದಿ ನೀಡಲಿದೆ.
BMIC Project
BMIC ಯೋಜನೆ
Updated on

ಬೆಂಗಳೂರು: ಬೆಂಗಳೂರು- ಮೈಸೂರು ಮೂಲಸೌಕರ್ಯ ಕಾರಿಡಾರ್ ಯೋಜನೆ ಅನುಷ್ಠಾನ ಕುರಿತು ಇದುವರೆಗೂ ಆಗಿರುವ ಪ್ರಗತಿ ಹಾಗೂ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪರಾಮರ್ಶಿಸಿ ಸೂಕ್ತ ಶಿಫಾರಸ್ಸುಗಳನ್ನು ಮಾಡಲು ಏಳು ಸಚಿವರನ್ನೊಳಗೊಂಡ ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಲಾಗಿದೆ.

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಈ ಸಮಿತಿಯ ಅಧ್ಯಕ್ಷರಾಗಿದ್ದು, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್. ಕೆ. ಪಾಟೀಲ್, ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಕೆ. ಹೆಚ್. ಮುನಿಯಪ್ಪ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ. ಬಿ. ಪಾಟೀಲ್, ಸಮಾಜ ಕಲ್ಯಾಣ ಸಚಿವ ಡಾ. ಹೆಚ್. ಸಿ. ಮಹಾದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಸಮಿತಿಯ ಸದಸ್ಯರಾಗಿದ್ದಾರೆ.

BMIC Project
ಬಿಎಂಐಸಿ ಯೋಜನೆಯಲ್ಲಿ ನೈಸ್ ಅಕ್ರಮ: ಒಪ್ಪಂದ ರದ್ದು ಮಾಡುವಂತೆ ಹೆಚ್'ಡಿಕೆ ಒತ್ತಾಯ

ಈ ಸಮಿತಿಯು ಕಾನೂನು ತಜ್ಞರು ಹಾಗೂ ವಿಷಯದ ಪರಿಣಿತರೊಂದಿಗೆ ಚರ್ಚಿಸಿ ಕಾನೂನಾತ್ಮಕವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಎರಡು ತಿಂಗಳೊಳಗೆ ತನ್ನ ವರದಿ ನೀಡಲಿದೆ. ಲೋಕೋಪಯೋಗಿ ಇಲಾಖೆಯು ಈ ಸಚಿವ ಸಂಪುಟ ಉಪ ಸಮಿತಿಗೆ ಅಗತ್ಯ ನೆರವು ನೀಡಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com