ಬೆಂಗಳೂರು: ಅನಧಿಕೃತ ಬ್ಯಾನರ್ ಗಾಳಿಗೆ ಮುರಿದು ಬಿದ್ದು ನಾಲ್ವರಿಗೆ ಗಾಯ

ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಮತ್ತು ಅವರ ಪುತ್ರ ಗೋವಿಂದರಾಜನಗರ ಶಾಸಕ ಪ್ರಿಯಾ ಕೃಷ್ಣ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು ಅಭಿಮಾನಿಗಳು ಫ್ಲೆಕ್ಸ್'ಗಳನ್ನು ಹಾಕಿದ್ದರು ಎನ್ನಲಾಗಿದೆ.
An unauthorised banner that fell on a car near Nagarabhavi Circle on Saturday
ಶನಿವಾರ ನಾಗರಭಾವಿ ವೃತ್ತದ ಬಳಿ ಕಾರಿನ ಮೇಲೆ ಬಿದ್ದ ಅನಧಿಕೃತ ಬ್ಯಾನರ್(Photo | Express)
Updated on

ಬೆಂಗಳೂರು: ಅನಧಿಕೃತ ಬ್ಯಾನರ್ ಮುರಿದು ಬಿದ್ದ ಪರಿಣಾಮ ನಾಲ್ವರಿಗೆ ಗಾಯಗಳಾಗಿರುವ ಘಟನೆ ನಗರದ ನಾಗರಭಾವಿ ವೃತ್ತದ ಬಳಿ ಶನಿವಾರ ನಡೆದಿದೆ.

ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಮತ್ತು ಅವರ ಪುತ್ರ ಗೋವಿಂದರಾಜನಗರ ಶಾಸಕ ಪ್ರಿಯಾ ಕೃಷ್ಣ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು ಅಭಿಮಾನಿಗಳು ಫ್ಲೆಕ್ಸ್'ಗಳನ್ನು ಹಾಕಿದ್ದರು ಎನ್ನಲಾಗಿದೆ.

ಮಳೆ ಹಾಗೂ ಬಲವಾದ ಗಾಳಿಯ ಪರಿಣಾಮ ಸಂಜೆ 4 ಗಂಟೆ ಸುಮಾರಿಗೆ ಬ್ಯಾನರ್ ಮುರಿದು ಬಿದ್ದಿದೆ. ಈ ವೇಳೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತಂದೆ ಮತ್ತು ಮಗಳು ಸೇರಿದಂತೆ ನಾಲ್ವರಿಗ ಗಾಯಳಾಗಿವೆ.

ಬ್ಯಾನರ್ ಮುರಿದು ಬಿದ್ದ ಪರಿಣಾಮ ಕಾರು ಹಾನಿಗೊಳಗಾಗಿದ್ದು. ಘಟನೆ ಬಳಿಕ ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಏತನ್ಮಧ್ಯೆ, ಈವರೆಗೆ ಯಾವುದೇ ದೂರುಗಳು ದಾಖಲಾಗಿಲ್ಲ ಎಂದು ಚಂದ್ರಾ ಲೇಔಟ್ ಪೊಲೀಸರು ತಿಳಿಸಿದ್ದಾರೆ.

ಘಟನೆ ಬೆನ್ನಲ್ಲೇ ನೆಟ್ಟಿಗರು ರಾಜ್ಯ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರುತ್ತಿದ್ದಾರೆ. ನಗರದಲ್ಲಿ ಬ್ಯಾನರ್‌ಗಳನ್ನು ನಿಷೇಧಿಸಲಾಗಿದೆ. ಆದರೂ, ಮೂಲೆಮೂಲೆಗಳಲ್ಲೂ ಬ್ಯಾನರ್ ಗಳು ರಾರಾಜಿಸುತ್ತಿವೆ. ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

An unauthorised banner that fell on a car near Nagarabhavi Circle on Saturday
ನಗರದ ಅನಧಿಕೃತ ಫ್ಲೆಕ್ಸ್-ಬ್ಯಾನರ್ ತೆರವುಗೊಳಿಸಿ, ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಿ: ಡಿ.ಕೆ ಶಿವಕುಮಾರ್

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com