ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ: ತನಿಖೆ ನಂತರವೇ ಯಾರು ಕೊಂದರು ಎಂಬುದು ತಿಳಿಯಲಿದೆ- ಜಿ ಪರಮೇಶ್ವರ

ನಿವೃತ್ತ ಐಪಿಎಸ್ ಅಧಿಕಾರಿ ಭಾನುವಾರ ಮಧ್ಯಾಹ್ನ ಬೆಂಗಳೂರಿನಲ್ಲಿರುವ ತಮ್ಮ ಎಚ್‌ಎಸ್‌ಆರ್ ಲೇಔಟ್ ನಿವಾಸದಲ್ಲಿ ಮೃತಪಟ್ಟಿರುವುದು ಪತ್ತೆಯಾಗಿತ್ತು.
Dr. G. Parameshwar
ಡಾ. ಜಿ. ಪರಮೇಶ್ವರ್
Updated on

ಬೆಂಗಳೂರು: ರಾಜ್ಯದ ನಿವೃತ್ತ ಪೊಲೀಸ್ ಮಹಾನಿರ್ದೇಶಕ (DGP) ಓಂ ಪ್ರಕಾಶ್ ಅವರನ್ನು ಅವರ ಪತ್ನಿ ಪಲ್ಲವಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದ್ದರೂ, ಅವರ ಹತ್ಯೆಯ ಹಿಂದಿನ ಸತ್ಯವನ್ನು ವಿವರವಾದ ತನಿಖೆಯಿಂದ ಹೊರತರಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ ಸೋಮವಾರ ಹೇಳಿದ್ದಾರೆ.

ನಿವೃತ್ತ ಐಪಿಎಸ್ ಅಧಿಕಾರಿ ಭಾನುವಾರ ಮಧ್ಯಾಹ್ನ ಬೆಂಗಳೂರಿನಲ್ಲಿರುವ ತಮ್ಮ ಎಚ್‌ಎಸ್‌ಆರ್ ಲೇಔಟ್ ನಿವಾಸದಲ್ಲಿ ಮೃತಪಟ್ಟಿರುವುದು ಪತ್ತೆಯಾಗಿತ್ತು.

ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ, 'ಮಾಜಿ ಡಿಜಿಪಿ ಓಂ ಪ್ರಕಾಶ್ ಅವರನ್ನು ಕೊಲೆ ಮಾಡಲಾಗಿದೆ. ಅವರ ಪತ್ನಿ (ಪಲ್ಲವಿ) ಅವರನ್ನು ಕೊಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ವಿವರವಾದ ತನಿಖೆಯಿಂದ ಮಾತ್ರ ಸತ್ಯ ಹೊರಬರುತ್ತದೆ' ಎಂದು ತಿಳಿಸಿದರು.

2015ರಲ್ಲಿ ನಾನು ಗೃಹ ಸಚಿವರಾಗಿದ್ದಾಗ ಓಂ ಪ್ರಕಾಶ್ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಆಗಿದ್ದರು. ತನಿಖೆ ಆರಂಭವಾಗಿದೆ ಮತ್ತು ತನಿಖಾಧಿಕಾರಿ ಇನ್ನೂ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲವಾದ್ದರಿಂದ ತನಗೆ ಯಾವುದೇ ಸುಳಿವು ಸಿಕ್ಕಿಲ್ಲ. ಕೊಲೆಗೆ ಕಾರಣ ಏನೆಂಬುದು ತನಿಖೆಯ ನಂತರವಷ್ಟೇ ತಿಳಿಯಲಿದೆ ಎಂದು ಹೇಳಿದರು.

Dr. G. Parameshwar
ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಬರ್ಬರ ಕೊಲೆ

ಪಲ್ಲವಿ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದ್ದು, ದಂಪತಿ ನಡುವಿನ ಭಿನ್ನಾಭಿಪ್ರಾಯದ ಬಗ್ಗೆ ತನಗೆ ತಿಳಿದಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com