ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ ಸಿಸಿಬಿಗೆ ವರ್ಗಾವಣೆ

ಪ್ರಕರಣದ ತನಿಖೆ ನಡೆಸುವಂತೆ ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಎಸಿಪಿಗೆ ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ.
Karnataka's Former Police Chief OM Prakash
ನಿವೃತ್ತ ಪೊಲೀಸ್​ಮಹಾನಿರ್ದೇಶಕ ಓಂ ಪ್ರಕಾಶ್ ಹಾಗೂ ಅವರ ಪತ್ನಿ
Updated on

ಬೆಂಗಳೂರು: ರಾಜ್ಯದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರು ಸಿಸಿಬಿಗೆ ವರ್ಗಾಯಿಸಿ ಸೋಮವಾರ ಆದೇಶ ಹೊರಡಿಸಿದ್ದಾರೆ.

ಪ್ರಕರಣದ ತನಿಖೆ ನಡೆಸುವಂತೆ ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಎಸಿಪಿಗೆ ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ.

ಓಂ ಪ್ರಕಾಶ್ ಕೊಲೆ ಹಿಂದೆ ಹಲವು ಕಾರಣಗಳು ಕೇಳಿಬರುತ್ತಿವೆ. ಅವರ ಪತ್ನಿ ಪಲ್ಲವಿ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರಿಂದ ಭ್ರಮೆಯಲ್ಲಿ ಪತಿಯನ್ನು ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎನ್ನಲಾಗುತ್ತಿದೆ.

Karnataka's Former Police Chief OM Prakash
ಸಕಲ ಸರ್ಕಾರಿ ಗೌರವದೊಂದಿಗೆ ಕರ್ನಾಟಕ ಮಾಜಿ ಡಿಜಿಪಿ ಓಂ ಪ್ರಕಾಶ್ ಅಂತ್ಯಕ್ರಿಯೆ

ಇನ್ನು ಆಸ್ತಿ ಕಲಹದಿಂದ ಓಂ ಪ್ರಕಾಶ್ ಅವರು ಕೊಲೆಯಾದಾರಾ ಎಂಬ ಅನುಮಾನವೂ ವ್ಯಕ್ತವಾಗಿದೆ. ಹತ್ಯೆಗೆ ನಿಖರ ಕಾರಣ ಹಾಗೂ ಆಳವಾದ ತನಿಖೆ ನಡೆಸಲು ಪ್ರಕರಣವನ್ನ ಸಿಸಿಬಿಗೆ ವರ್ಗಾಯಿಸಲಾಗಿದೆ.

68 ವರ್ಷದ ನಿವೃತ್ತ ಐಪಿಎಸ್ ಅಧಿಕಾರಿಯನ್ನು ಅವರ ಪತ್ನಿ ಪಲ್ಲವಿ ಮತ್ತು ಮಗಳು ಕೃತಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎಂದು ವರದಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com