ಹವಾಮಾನ ವೈಪರೀತ್ಯ, ಉತ್ಪಾದನೆಯಲ್ಲಿ ಕುಸಿತ: ಕಾಳು ಮೆಣಸಿನ ಬೆಲೆ ಕೆಜಿಗೆ 1000 ರೂ ಗೆ ಏರಿಕೆ?

ವಿಯೆಟ್ನಾಂ ಮತ್ತು ಬ್ರೆಜಿಲ್‌ನಂತಹ ದೇಶಗಳಲ್ಲಿ ಕೊಯ್ಲು ಕಡಿಮೆಯಾಗುವುದರಿಂದ ಜಾಗತಿಕ ಪೂರೈಕೆ ಬಿಕ್ಕಟ್ಟು ಉಂಟಾಗಿದ್ದು, ಬೆಲೆಗಳ ಮೇಲೆ ಒತ್ತಡ ಹೆಚ್ಚಿದೆ.
Representational image
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕಳೆದ ಎರಡು ವರ್ಷಗಳಿಂದ ಶೇಕಡ 40 ರಷ್ಟು ದರ ಏರಿಕೆ ಕಂಡಿರುವ ಕರಿಮೆಣಸು ಪೂರೈಕೆ ಕೊರತೆ ಮತ್ತು ಬೇಡಿಕೆ ಹೆಚ್ಚಳದ ಪರಿಣಾಮ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದೆ.

ಕಾಳು ಮೆಣಸು ದರ ಕೆಜಿಗೆ 900 ರಿಂದ 1,100 ರೂಪಾಯಿವರೆಗೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕರ್ನಾಟಕದಲ್ಲಿ ಹವಾಮಾನ ಬದಲಾವಣೆ, ಅಕಾಲಿಕ ಮಳೆ, ಬೆಳೆಗೆ ರೋಗಬಾಧೆ ಇತ್ಯಾದಿ ಕಾರಣಗಳಿಂದ ಬೆಳೆ ಕುಸಿತವಾಗಿದೆ.

ಎರಡು ವರ್ಷಗಳ ಹಿಂದೆ ಕೆಜಿಗೆ ರೂ. 400-450 ರ ಆಸುಪಾಸಿನಲ್ಲಿದ್ದ ಮೆಣಸಿನ ಬೆಲೆ ಈಗ ರೂ. 700 ಕ್ಕೆ ಏರಿದೆ. ವಿಯೆಟ್ನಾಂ ಮತ್ತು ಬ್ರೆಜಿಲ್‌ನಂತಹ ದೇಶಗಳಲ್ಲಿ ಕೊಯ್ಲು ಕಡಿಮೆಯಾಗುವುದರಿಂದ ಜಾಗತಿಕ ಪೂರೈಕೆ ಬಿಕ್ಕಟ್ಟು ಉಂಟಾಗಿದ್ದು, ಬೆಲೆಗಳ ಮೇಲೆ ಒತ್ತಡ ಹೆಚ್ಚಿದೆ ಎಂದು ಕರ್ನಾಟಕ ಸಾಂಬಾರು ಸಂಘ ಮತ್ತು ಚಿಕ್ಕಮಗಳೂರು ಪ್ಲಾಂಟರ್ಸ್ ಅಸೋಸಿಯೇಷನ್‌ನ ಪ್ಲಾಂಟರ್ಸ್ ಅಸೋಸಿಯೇಷನ್‌ನ ಪ್ಲಾಂಟರ್ಸ್ ಹೇಳಿದ್ದಾರೆ.

ಬರಗಾಲದಿಂದಾಗಿ ಹೂಬಿಡುವಿಕೆ ವಿಳಂಬವಾಯಿತು ಮತ್ತು ನಂತರ ಹಠಾತ್ ಮಳೆಯಿಂದಾಗಿ ಬೆಳೆಯ ಮೇಲೆ ಪರಿಣಾಮ ಬೀರಿತು. ಇದು ಒಟ್ಟಾರೆ ಉತ್ಪಾದನೆ ಮೇಲೆ ಮೇಲೆ ಪರಿಣಾಮ ಬೀರಿತ್ತು. ಇದರಿಂದಾಗಿ ಪ್ರಸಕ್ತ ಋತುವಿನಲ್ಲಿ ಉತ್ಪಾದನೆಯು ಶೇ 40 ರಷ್ಟು ಕುಸಿತ ಕಂಡಿದೆ ಎಂದು ಕರ್ನಾಟಕ ಸ್ಪೈಸ್ ಅಸೋಸಿಯೇಷನ್​ನ ಚಂದ್ರಶೇಖರ ರೆಡ್ಡಿ ತಿಳಿಸಿದ್ದಾರೆ. ಕಾಳು ಮೆಣಸು ಬೆಳೆಗೆ ತೇವಾಂಶವುಳ್ಳ ಗಾಳಿ, ನೆರಳು ಪ್ರದೇಶ ಮತ್ತು ಚೆನ್ನಾಗಿ ನೀರಿನ ಅಂಶವಿರುವ ಮಣ್ಣು ಬೇಕಾಗುತ್ತದೆ. ಪಶ್ಚಿಮ ಘಟ್ಟಗಳು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಕರಿಮೆಣಸು ಉತ್ಪಾದನೆಗೆ ಪೂರಕ ವಾತಾವರಣ ಇವೆ.

Representational image
ಚಿಟಿಕೆಯಷ್ಟು ಮೆಣಸು ಬಳಸಿ, ಸ್ಥೂಲಕಾಯಕ್ಕೆ ಹೇಳಿ ಗುಡ್ ಬೈ!

ಆದರೂ, ಕರ್ನಾಟಕದ ಅತಿಹೆಚ್ಚು ಕರಿಮೆಣಸು ಬೆಳೆಯುವ ಪ್ರದೇಶಗಳಾದ ಕೊಡಗು, ಚಿಕ್ಕಮಗಳೂರುಗಳಲ್ಲಿ ಹವಾಮಾನ ಬದಲಾವಣೆಯ ಹೊಡೆತ ಬಿದ್ದಿದೆ. ಇದರಿಂದಾಗಿ ಬೆಳೆಯಲ್ಲಿ ಸ್ಥಿರತೆ ಕಾಯ್ದುಕೊಳ್ಳುವುದು ಕಷ್ಟಕರವಾಗಿ ಪರಿಣಮಿಸಿದೆ ಎಂದು ಕೃಷಿಕರು ತಿಳಿಸಿದ್ದಾರೆ. ಮಣ್ಣಿನಲ್ಲಿ ತೇವಾಂಶದ ಮಟ್ಟದ ಏರುಪೇರಿನಿಂದಾಗಿ ಶಿಲೀಂಧ್ರ ಸೋಂಕುಗಳೂ ಹೆಚ್ಚಾಗಿವೆ. ಇದು ಬೆಳೆ ಕುಸಿತಕ್ಕೆ ಕಾರಣವಾಗಿದೆ ಎಂದೂ ಅವರು ತಿಳಿಸಿದ್ದಾರೆ.

ಒಂದು ಬಳ್ಳಿ ಸೋಂಕಿಗೆ ಒಳಗಾದ ನಂತರ, ವಿಶೇಷವಾಗಿ ಬೇರು ಕೊಳೆತದಿಂದ, ಸಂಪೂರ್ಣವಾಗಿ ಹಾಳಾಗುತ್ತದೆ. ಮರು ನಾಟಿ ಮಾಡಲು ವರ್ಷಗಳೇ ಬೇಕಾಗುತ್ತದೆ. ಹವಾಮಾನ ಅಸ್ಥಿರತೆಯೊಂದಿಗೆ, ಇದು ಇಳುವರಿಯಲ್ಲಿ ತೀವ್ರ ಕುಸಿತಕ್ಕೆ ಕಾರಣವಾಗಿದೆ" ಎಂದು ರೆಡ್ಡಿ ಹೇಳಿದರು.

ಮುಂದಿನ ಎರಡು ತಿಂಗಳವರೆಗೆ ಹೊಸ ಬೆಳೆ ಮಾರುಕಟ್ಟೆ ಪ್ರವೇಶಿಸುವ ಸಾಧ್ಯತೆ ಇಲ್ಲ. ಈ ಪೂರೈಕೆ ಬಿಕ್ಕಟ್ಟು ಮುಂಬರುವ ತಿಂಗಳುಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಚಿಕ್ಕಮಗಳೂರು ಪ್ಲಾಂಟರ್ಸ್ ಅಸೋಸಿಯೇಷನ್‌ನ ಜಗದೀಶ ಎಂಕೆ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com