ಧಾರವಾಡದಲ್ಲೂ ಜನಿವಾರ ವಿವಾದ: ಜನಿವಾರ ಕತ್ತರಿಸಿ ಕೈಗೆ ಕೊಟ್ಟ ಸಿಬ್ಬಂದಿ, ಕ್ರಮಕ್ಕೆ ಆಗ್ರಹ

ಕಳೆದೆರಡು ದಿನಗಳಿಂದ ಮಾಧ್ಯಮಗಳಲ್ಲಿ ಬರುತ್ತಿದ್ದ ಶಿವಮೊಗ್ಗ, ಬೀದರ್ ಜನಿವಾರದ ಸುದ್ದಿಗಳನ್ನು ಗಮನಿಸಿದ್ದ ಹುಡುಗ ತನಗಾಗಿದ್ದರ ಕುರಿತು ತನ್ನ ತಂದೆಗೆ ತಿಳಿಸಿದ್ದಾನೆ.
Akhila Karnataka Brahmana Mahasabha activists stage a demonstration against the janivara row in Bidar on Saturday.
ಜನಿವಾರ ವಿವಾದದ ವಿರುದ್ಧ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿರುವುದು.
Updated on

ಧಾರವಾಡ: ಶಿವಮೊಗ್ಗ, ಬೀದರ್ ಬಳಿಕ ಇದೀಗ ಧಾರವಾಡದಲ್ಲಿಯೂ ಜನಿವಾರ ಕತ್ತರಿಸಿ ಸಿಇಟಿ ಪರೀಕ್ಷೆಗೆ ಅವಕಾಶ ಕೊಟ್ಟಿರುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಧಾರವಾಡ ಜಿಲ್ಲೆಯ ಹುರಕಡ್ಲಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ.

ಧಾರವಾಡ ನಗರದ ಜೆಎಸ್‌ಎಸ್ (JSS) ಕಾಲೇಜಿನ ವಿದ್ಯಾರ್ಥಿ ನಂದನ್ ಏರಿ ಸಿಇಟಿ ಪರೀಕ್ಷೆ ಬರೆಯಲು ತೆರಳಿದ್ದು, ಈ ವೇಳೆ ವಿದ್ಯಾರ್ಥಿಗಳ ತಪಾಸಣೆ ಮಾಡುವಾಗ ಪರೀಕ್ಷಾ ಕೇಂದ್ರದ ಸಿಬ್ಬಂದಿಯೊಬ್ಬರು ನಂದನ್ ಎಂಬ ಅಭ್ಯರ್ಥಿ ಹಾಕಿಕೊಂಡಿದ್ದ ಜನಿವಾರವನ್ನು ಗಮನಿಸಿದ್ದಾರೆ.

ಜನಿವಾರ ಹಾಕಿಕೊಂಡು ಪರೀಕ್ಷಾ ಕೇಂದ್ರದೊಳಗೆ ಹೋಗುವಂತಿಲ್ಲ ಎಂದು ತಡೆದಿದ್ದಾರೆ. ಈ ವೇಳೆ ವಿದ್ಯಾರ್ಥಿ ನಾನು ಬ್ಯಾಗಿನೊಳಗೆ ಇಟ್ಟುಕೊಳ್ಳುತ್ತೇನೆ ಎಂದು ಹೇಳಿದ್ದಾನೆ. ಆದರೆ, ಅದಕ್ಕೂ ಅವಕಾಶ ನೀಡದೇ ಸಮಯವಿಲ್ಲ ಎಂದು ಜನಿವಾರವನ್ನು ಕತ್ತರಿಸಿದ್ದಾರೆಂಬ ಆರೋಪ ಕೇಳಿ ಬಂದಿದೆ.

ಕಳೆದೆರಡು ದಿನಗಳಿಂದ ಮಾಧ್ಯಮಗಳಲ್ಲಿ ಬರುತ್ತಿದ್ದ ಶಿವಮೊಗ್ಗ, ಬೀದರ್ ಜನಿವಾರದ ಸುದ್ದಿಗಳನ್ನು ಗಮನಿಸಿದ್ದ ಹುಡುಗ ತನಗಾಗಿದ್ದರ ಕುರಿತು ತನ್ನ ತಂದೆಗೆ ತಿಳಿಸಿದ್ದಾನೆ.

Akhila Karnataka Brahmana Mahasabha activists stage a demonstration against the janivara row in Bidar on Saturday.
ಬೀದರ್ ಜನಿವಾರ ಪ್ರಕರಣ: ಸುಚಿವ್ರತ್ ಗೆ ಬಿಕೆಐಟಿಯಲ್ಲಿ ಉಚಿತ ಸೀಟ್- ಈಶ್ವರ ಖಂಡ್ರೆ

ಇದನ್ನು ತಿಳಿದ ತಂದೆ ಆಕ್ರೋಶಗೊಂಡಿದ್ದು, ಇದೇ ಕಾರಣದಿಂದ ಮಗನಿಗೆ ಸರಿಯಾಗಿ ಪರೀಕ್ಷೆ ಬರೆಯಲು ಆಗಿಲ್ಲ ಎಂದು ಕಿಡಿಕಾರಿದ್ದಾರೆ.

ಘಟನೆ ಸಬಂಧ ಪ್ರತಿಕ್ರಿಯೆ ನೀಡಿರುವ ಸಚಿವ ಸಂತೋಷ್ ಲಾಡ್, ಇಂತಹ ಘಟನೆಗಳ ಬಗ್ಗೆ ಲಿಖಿತ ದೂರುಗಳು ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇಂತಹ ಕೃತ್ಯಗಳಲ್ಲಿ ಭಾಗಿಯಾಗಿರುವವರು ಸರ್ಕಾರಿ ಅಧಿಕಾರಿಗಳೋ ಅಥವಾ ಖಾಸಗಿ ಉದ್ಯೋಗಿಗಳೋ ಎಂಬುದು ಸ್ಪಷ್ಟವಾಗಿಲ್ಲ. ಈ ಸಮಸ್ಯೆಯನ್ನು ಬಗೆಹರಿಸಲಾಗುವುದು ಮತ್ತು ತಪ್ಪಿತಸ್ಥರೆಂದು ಕಂಡುಬಂದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com