ನಿವೃತ್ತ DGP ಓಂ ಪ್ರಕಾಶ್ ಹತ್ಯೆ ಪ್ರಕರಣ: ಆರೋಪಿ ಪತ್ನಿಗೆ 14 ದಿನ ನ್ಯಾಯಾಂಗ ಬಂಧನ

ಕೊಲೆ ಆರೋಪಿ ಪಲ್ಲವಿ ಅವರನ್ನು ಪೊಲೀಸರು ಸೋಮವಾರ ನ್ಯಾಯಧೀಶರ ಮುಂದೆ ಹಾಜರುಪಡಿಸಿದ್ದರು. ಜರ್ಡ್ಜ್ ಜಿ.ಎ.ಲತಾದೇವಿ ಅವರು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ.
Karnataka's Former Police Chief OM Prakash
ನಿವೃತ್ತ ಪೊಲೀಸ್​ಮಹಾನಿರ್ದೇಶಕ ಓಂ ಪ್ರಕಾಶ್ ಹಾಗೂ ಅವರ ಪತ್ನಿ
Updated on

ಬೆಂಗಳೂರು: ರಾಜ್ಯದ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಪಲ್ಲವಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್‌ ಆದೇಶ ಹೊರಡಿಸಿದೆ.

ಕೊಲೆ ಆರೋಪಿ ಪಲ್ಲವಿ ಅವರನ್ನು ಪೊಲೀಸರು ಸೋಮವಾರ ನ್ಯಾಯಧೀಶರ ಮುಂದೆ ಹಾಜರುಪಡಿಸಿದ್ದರು. ಜರ್ಡ್ಜ್ ಜಿ.ಎ.ಲತಾದೇವಿ ಅವರು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ.

ಇದರಂತೆ ಮೇ 3ರ ವರೆಗೆ ಕೊಲೆ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಆರೋಪಿ ಪಲ್ಲವಿ ಅವರನ್ನು ಪರಪ್ಪನ ಅಗ್ರಹಾರ ಜೈಲಿನ ಕಡೆಗೆ ಪೊಲೀಸರು ಕರೆದೊಯ್ದಿದ್ದಾರೆಂದು ತಿಳಿದುಬಂದಿದೆ.

ಈ ನಡುವೆ ಓಂ ಪ್ರಕಾಶ್ ಅವರ ಪುತ್ರಿ ಕೃತಿಯನ್ನು ಪರೀಕ್ಷೆಗಾಗಿ ನಿಮ್ಹಾನ್ಸ್'ಗೆ ಸ್ಥಳಾಂತರ ಮಾಡಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ವಿಚಾರಣೆಯ ಸಮಯದಲ್ಲಿ, ಪಲ್ಲವಿ ತಮ್ಮ ಪತಿಯನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದು, ಪತಿ ತನ್ನನ್ನು ಮತ್ತು ತನ್ನ ಮಗಳನ್ನು ಕೊಲ್ಲುತ್ತಾನೆಂದು ತಿಳಿದಿುಬಂದಿತ್ತು. ಹೀಗಾಗಿ ಹತ್ಯೆ ಮಾಡಲು ನಿರ್ಧರಿಸಿದ್ದೆ ಎಂದು ಹೇಳಿಕೊಂಡಿದ್ದಾರೆಂದು ತಿಳಿದುಬಂದಿದೆ.

Karnataka's Former Police Chief OM Prakash
ಮಾಜಿ DGP ಓಂ ಪ್ರಕಾಶ್ ಹತ್ಯೆ ಪ್ರಕರಣ: ಚೂರಿ ಇರಿತಕ್ಕೂ ಮುನ್ನ ಕಣ್ಣಿಗೆ ಖಾರದ ಪುಡಿ ಎರಚಿದ್ದ ಪತ್ನಿ, 10ಕ್ಕೂ ಹೆಚ್ಚು ಬಾರಿ ಇರಿದು ಕೊಲೆ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com