ಪಹಲ್ಗಾಮ್ ಉಗ್ರ ದಾಳಿ: ಸರ್ಕಾರಿ ಗೌರವಗಳೊಂದಿಗೆ ಮಂಜುನಾಥ್ ರಾವ್, ಭರತ್ ಭೂಷಣ್ ಅಂತ್ಯಕ್ರಿಯೆ

ಮೃತ ಮಂಜುನಾಥ್ ರಾವ್ ಅವರ ಪಾರ್ಥಿವ ಶರೀರ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗ ತಲುಪಿದರೆ, ಮತ್ತೋರ್ವ ಸಂತ್ರಸ್ತ ಭರತ್ ಭೂಷಣ್ ಪಾರ್ಥಿವ ಶರೀರ ಬೆಂಗಳೂರಿನಲ್ಲಿರುವ ಅವರ ಸ್ವಗೃಹ ತಲುಪಿತು.
ಪಹಲ್ಗಾಮ್ ಉಗ್ರ ದಾಳಿ: ಸರ್ಕಾರಿ ಗೌರವಗಳೊಂದಿಗೆ ಮಂಜುನಾಥ್ ರಾವ್, ಭರತ್ ಭೂಷಣ್ ಅಂತ್ಯಕ್ರಿಯೆ
Updated on

ಬೆಂಗಳೂರು: ಇಂದು ಬೆಳಿಗ್ಗೆ ಕಾಶ್ಮೀರದಿಂದ ಕರ್ನಾಟಕಕ್ಕೆ ಆಗಮಿಸಿದ ಪಹಲ್ಗಾಮ್ ಉಗ್ರದಾಳಿಯ ಸಂತ್ರಸ್ತರ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.

ಮೃತ ಮಂಜುನಾಥ್ ರಾವ್ ಅವರ ಪಾರ್ಥಿವ ಶರೀರ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗ ತಲುಪಿದರೆ, ಮತ್ತೋರ್ವ ಸಂತ್ರಸ್ತ ಭರತ್ ಭೂಷಣ್ ಪಾರ್ಥಿವ ಶರೀರ ಬೆಂಗಳೂರಿನಲ್ಲಿರುವ ಅವರ ಸ್ವಗೃಹ ತಲುಪಿತು.

ಬಳಿಕ ಭರತ್ ಭೂಷಣ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಇನ್ನಿತರ ಗಣ್ಯರು ಭೇಟಿ ನೀಡಿ ಅಂತಿಮ ದರ್ಶನ ಪಡೆದು ಕುಟುಂಬಕ್ಕೆ ಸಾಂತ್ವನ ಹೇಳಿದರು.

ಮೃತ ಮಂಜುನಾಥ್ ಅಂತ್ಯಕ್ರಿಯೆ ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ಸರ್ಕಾರಿ ಗೌರವಗಳೊಂದಿಗೆ ನಡೆದರೆ, ಭರತ್ ಭೂಷಣ್ ಅಂತ್ಯಕ್ರಿಯೆ ಹೆಬ್ಬಾಳದ ಚಿತಾಗಾರದಲ್ಲಿ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.

ಪಹಲ್ಗಾಮ್ ಉಗ್ರ ದಾಳಿ: ಸರ್ಕಾರಿ ಗೌರವಗಳೊಂದಿಗೆ ಮಂಜುನಾಥ್ ರಾವ್, ಭರತ್ ಭೂಷಣ್ ಅಂತ್ಯಕ್ರಿಯೆ
Pahalgam terror attack: ರಾಜ್ಯದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ನಿಗಾ ವಹಿಸಲು ಸೂಚನೆ- ಸಿದ್ದರಾಮಯ್ಯ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com