ನಿಮ್ಮನ್ನು ಪೀಸ್​ ಪೀಸ್ ಮಾಡಿ ಫ್ರಿಡ್ಜ್ ಮತ್ತು ಟ್ರ್ಯಾಲಿ ಬ್ಯಾಗ್‌ಗೆ ತುಂಬ್ತಿನಿ: CM, DCM ಗೆ ಬೆದರಿಕೆ ಸಂದೇಶ

ಇಬ್ಬರನ್ನೂ ಕೊಲೆ ಮಾಡಿ ಫ್ರಿಜ್‌ ಮತ್ತು ಟ್ರ್ಯಾಲಿ ಬ್ಯಾಗ್‌ಗೆ ತುಂಬುವುದಾಗಿ ಇ-ಮೇಲ್‌ ಸಂದೇಶದಲ್ಲಿ ಬೆದರಿಕೆ ಹಾಕಲಾಗಿದೆ. ಈ ಸಂದೇಶ ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Dk Shivakumar And siddaramaiah
ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ
Updated on

ಬೆಂಗಳೂರು: ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದಕರ ಗುಂಡಿನ ದಾಳಿಗೆ ಇಡೀ ದೇಶವೇ ಬೆಚ್ಚಿಬಿದ್ದಿದೆ. ಇದರ ನಡುವೆಯೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ​ಅವರಿಗೆ ಬೆದರಿಕೆ ಮೇಲ್ ಒಂದು ಬಂದಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಕೊಲೆ ಮಾಡುವುದಾಗಿ ಕಿಡಿಗೇಡಿಯೊಬ್ಬ ಇ-ಮೇಲ್‌ ಮೂಲಕ ಸಂದೇಶ ಕಳುಹಿಸಿ ಬೆದರಿಕೆ ಹಾಕಿದ್ದಾನೆ. ಇಬ್ಬರನ್ನೂ ಕೊಲೆ ಮಾಡಿ ಫ್ರಿಜ್‌ ಮತ್ತು ಟ್ರ್ಯಾಲಿ ಬ್ಯಾಗ್‌ಗೆ ತುಂಬುವುದಾಗಿ ಇ-ಮೇಲ್‌ ಸಂದೇಶದಲ್ಲಿ ಬೆದರಿಕೆ ಹಾಕಲಾಗಿದೆ. ಈ ಸಂದೇಶ ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸಿಂಧಾರ್‌ ರಜಪೂತ್‌ ಹೆಸರಿನ ಇ-ಮೇಲ್‌ನಿಂದ ಈ ಬೆದರಿಕೆ ಸಂದೇಶ ಬಂದಿದೆ ಎಂಬುದು ಗೊತ್ತಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಈ ಬೆದರಿಕೆ ಇ-ಮೇಲ್‌ ಅನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌, ಗೃಹ ಸಚಿವರು, ನಗರ ಪೊಲೀಸ್‌ ಕಮಿಷನರ್‌ಗೂ ರವಾನೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಮಪುರ ಪ್ರಭಾಕರ್​ಗೆ ಒಂದು ಕೋಟಿ ಸಾಲ ಕೊಟ್ಟಿದ್ದೇನೆ. ಆತ ಇದುವರೆಗೂ ಸಾಲ ವಾಪಸ್ ಕೊಟ್ಟಿಲ್ಲ. ಪ್ರಭಾಕರ್​ಗೆ ಬೇಗ ಸಾಲ ವಾಪಸ್ ಕೊಡೋಕೆ‌ ಹೇಳಿ. ಆ ಪ್ರಭಾಕರ್ ಹಣವನ್ನು ತನ್ನ ನಾದಿನಿ ಹಾಗೂ ಪೋಷಕರ ಮನೆಯಲ್ಲಿ ಇಟ್ಟಿದ್ದಾನೆ ಎಂದು ಬರೆಯಲಾಗಿದೆ. ಪ್ರಭಾಕರ್ ಗೆ ಇಬ್ಬರು ಮಕ್ಕಳಿದ್ದಾರೆ. ಇತ್ತೀಚೆಗೆ ಒಬ್ಬ ಮಗನಿಗೆ ಮದುವೆ ಮಾಡಿದ್ದಾನೆ. ಸಾಲದ ಹಣವನ್ನು ವಾಪಸ್ ನೀಡಲು ಆತನಿಗೆ ಆದಾಯ ಮೂಲ ಇಲ್ಲ. ಹೀಗಾಗಿ ಪ್ರಭಾಕರ್ ನ ಕೊಲೆ ಮಾಡ್ತೀನಿ. ನೀವು ಹಣ ಕೊಡಿಸಿಲ್ಲ ಅಂದ್ರೆ ನಿಮ್ಮನ್ನು ಕೊಲೆ ಮಾಡ್ತೀನಿ ಅಂತ ಇ‌ಮೇಲ್ ಮಾಡಿದ್ದಾನೆ.

ಸದ್ಯ ಇ ಮೇಲ್ ಆಧರಿಸಿ ದೂರು ದಾಖಲಿಸಿರೋ ಪೊಲೀಸರು, ಎಫ್ ಐ ಆರ್ ದಾಖಲಿಸಿ ಸಿಂದಾರ್ ರಜಪೂತ್ ಗಾಗಿ ಹುಡುಕಾಟ ನಡೆಸಿದ್ದಾರೆ.

Dk Shivakumar And siddaramaiah
ಭದ್ರತಾ ಪಡೆಗಳು ಉಗ್ರರ ಬೆದರಿಕೆ ನಿರ್ಲಕ್ಷಿಸಿದ್ದೇ ಪಹಲ್ಗಾಮ್ ದುರಂತಕ್ಕೆ ಕಾರಣ: ಗುಪ್ತಚರ ಮೂಲಗಳು

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com