ಮಂಗಳೂರು: 2023ರ ಮುಸ್ಲಿಂರ ಹತ್ಯೆ; ಪಹಲ್ಗಾಮ್​ ಉಗ್ರರ ದಾಳಿ ಸಮರ್ಥಿಸಿಕೊಂಡಿದ್ದ ವ್ಯಕ್ತಿ ಬಂಧನ!

2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್ ರೈಲ್ವೆ ನಿಲ್ದಾಣದಲ್ಲಿ ಚೇತನ್ ಸಿಂಗ್ ಎಂಬಾತ ಮೂವರು ಮುಸ್ಲಿಮರನ್ನು ಹತ್ಯೆ ಮಾಡಿದ್ದವನಿಗೆ ಶಿಕ್ಷೆಯಾಗಿದ್ದರೆ ಇಂದು ಕಾಶ್ಮೀರದಲ್ಲಿ ಇಂತಹ ಕೃತ್ಯ ನಡೆಯುತ್ತಿರಲಿಲ್ಲ ಎಂದು ಪೋಸ್ಟ್ ಮಾಡುವ ಮೂಲಕ ಪಹಲ್ಗಾಮ್ ಉಗ್ರ ದಾಳಿಯನ್ನು ಸಮರ್ಥಿಸಿಕೊಂಡಿದ್ದ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ.
ಮಂಗಳೂರು: 2023ರ ಮುಸ್ಲಿಂರ ಹತ್ಯೆ; ಪಹಲ್ಗಾಮ್​ ಉಗ್ರರ ದಾಳಿ ಸಮರ್ಥಿಸಿಕೊಂಡಿದ್ದ ವ್ಯಕ್ತಿ ಬಂಧನ!
Updated on

ಮಂಗಳೂರು: 2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್ ರೈಲ್ವೆ ನಿಲ್ದಾಣದಲ್ಲಿ ಚೇತನ್ ಸಿಂಗ್ ಎಂಬಾತ ಮೂವರು ಮುಸ್ಲಿಮರನ್ನು ಹತ್ಯೆ ಮಾಡಿದ್ದವನಿಗೆ ಶಿಕ್ಷೆಯಾಗಿದ್ದರೆ ಇಂದು ಕಾಶ್ಮೀರದಲ್ಲಿ ಇಂತಹ ಕೃತ್ಯ ನಡೆಯುತ್ತಿರಲಿಲ್ಲ ಎಂದು ಪೋಸ್ಟ್ ಮಾಡುವ ಮೂಲಕ ಪಹಲ್ಗಾಮ್ ಉಗ್ರ ದಾಳಿಯನ್ನು ಸಮರ್ಥಿಸಿಕೊಂಡಿದ್ದ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ.

ನಿಚ್ಚು ಮಂಗಳೂರು ಎಂಬ ಬಳಕೆದಾರ ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ದಕ್ಕಾಗಿ ಉಳ್ಳಾಲ ತಾಲೂಕಿನ ಉಳ್ಳಾಲತ್ತಿ ನಿವಾಸಿ ಸತೀಶ್ ಕುಮಾರ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಾರ್ವಜನಿಕ ಶಾಂತಿಗೆ ಭಂಗ ತರುವ ಉದ್ದೇಶದಿಂದ ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ಘಟನೆಯ ಕುರಿತು ಪ್ರಚೋದನಕಾರಿ ಮತ್ತು ಆಕ್ಷೇಪಾರ್ಹ ಹೇಳಿಕೆಗಳನ್ನು ಪೋಸ್ಟ್‌ನಲ್ಲಿ ಒಳಗೊಂಡಿತ್ತು. ದೂರುದಾರರು ಪೋಸ್ಟ್‌ನ ಸ್ಕ್ರೀನ್‌ಶಾಟ್‌ಗಳನ್ನು ಮತ್ತು ಬಳಕೆದಾರರ ಪ್ರೊಫೈಲ್ ಅನ್ನು ಸಾಕ್ಷ್ಯಕ್ಕಾಗಿ ಸಲ್ಲಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತಾ (BNS), 2023 ರ ಸೆಕ್ಷನ್ 192 ಮತ್ತು 353(1)(b) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆ ಮುಂದುವರೆದಿದೆ.

ಮಂಗಳೂರು: 2023ರ ಮುಸ್ಲಿಂರ ಹತ್ಯೆ; ಪಹಲ್ಗಾಮ್​ ಉಗ್ರರ ದಾಳಿ ಸಮರ್ಥಿಸಿಕೊಂಡಿದ್ದ ವ್ಯಕ್ತಿ ಬಂಧನ!
ಪತಿ ಕೊಲ್ಲಲು ಪತ್ನಿ ಪ್ಲಾನ್: ಪಹಲ್ಗಾಮ್ ದಾಳಿಯಲ್ಲಿ ಹತ್ಯೆಯಾದ ಮೃತನ ಪತ್ನಿಯ ಬಗ್ಗೆ ಒಸಾಫ್ ಖಾನ್‌ ಆಕ್ಷೇಪಾರ್ಹ ಕಮೆಂಟ್!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com