ಬೆಂಗಳೂರು: ತೋಟದ ಮನೆಯಲ್ಲಿ ಯುವ ವಕೀಲೆ ಜೊತೆಗೆ ಯುವಕನ ಶವ ಪತ್ತೆ, ಸಾವಿನ ಸುತ್ತ ಅನುಮಾನಗಳ ಹುತ್ತ

ಮೃತರನ್ನು ವಕೀಲೆ ರಮ್ಯಾ(27) ಹಾಗೂ ಪುನೀತ್ ಎಂದು ಗುರ್ತಿಸಲಾಗಿದೆ. ಇಬ್ಬರೂ ಸೀಲಿಂಗ್‌ ಫ್ಯಾನ್'ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ನೆಲಮಂಗಲ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀನಿವಾಸಪುರದಲ್ಲಿರುವ ತೋಟದ ಮನೆಯಲ್ಲಿ ವಕೀಲೆ ಹಾಗೂ ಯುವಕನ ಮೃತದೇಹ ಪತ್ತೆಯಾಗಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ಮೂಡತೊಡಗಿವೆ.

ಮೃತರನ್ನು ವಕೀಲೆ ರಮ್ಯಾ(27) ಹಾಗೂ ಪುನೀತ್ ಎಂದು ಗುರ್ತಿಸಲಾಗಿದೆ. ಇಬ್ಬರೂ ಸೀಲಿಂಗ್‌ ಫ್ಯಾನ್'ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಗುರುವಾರ ಸಂಜೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಆದರೆ ಸಾವು ಹಲವು ಅನುಮಾನಗಳಿಗೆ ಎಡೆಮಾಟಿಕೊಟ್ಟಿದೆ.

ಈ ಬಗ್ಗೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹಲವು ಆಯಾಮಾಗಳಲ್ಲಿ ತನಿಖೆ ಕೈಗೊಂಡಿದ್ದಾರೆ.

ಸಾಂದರ್ಭಿಕ ಚಿತ್ರ
ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇ: 3 ಕಾರುಗಳ ನಡುವೆ ಭೀಕರ ಅಪಘಾತ; ಓರ್ವ ಸಾವು

ಇನ್ನು ವಕೀಲೆ ರಮ್ಯ ಮನೆಯಲ್ಲಿ ವಾಸವಿದ್ದ ಪುನೀತ್ ಎಂಬಾತನ ಮೃತದೇಹ ಕೆಂಪಲಿಂಗನಹಳ್ಳಿಯ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಸಾವಿಗೆ ಕಾರಣ‌ ನಿಗೂಢವಾಗಿದೆ. ಮರಣೋತ್ತರ ಪರೀಕ್ಣೆಗೆ ಮೃತ ದೇಹ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ರಮ್ಯಾ ಸಾವಿನ ಸುತ್ತಲೂ ಅನುಮಾನಗಳು ಹುಟ್ಟಿಕೊಂಡಿದ್ದು, ಕುಟುಂಬಸ್ಥರು ಉದ್ಯಮಿ ದಿನೇಶ್ ಎಂಬಾತನ ಮೇಲೆ ಅನುಮಾನ ವ್ತಕ್ತಪಡಿಸಿದ್ದಾರೆ.

ಸದ್ಯ ಪೊಲೀಸರು ಕುಟುಂಬಸ್ಥರ ದೂರಿನ ಮೇರೆಗೆ ಕೊಲೆ ಆರೋಪದ (103) ಅಡಿ ಎಫ್ ಐಆರ್ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

"ರಮ್ಯಾ ಅವರ ಸಾವು ಉದ್ಯಮಿಯೊಂದಿಗಿನ ವೈಯಕ್ತಿಕ ಸಮಸ್ಯೆಗಳಿಂದಾಗಿರಬಹುದು ಎಂಬ ಅನುಮಾನಗಳು ವ್ಯಕ್ತವಾಗಿವೆ. ಆದರೆ ಪುನೀತ್ ರಮ್ಯಾ ಅವರ ಸಾವಿನ ನೋವು ಸಹಿಸಲಾರದೆ ಆತ್ಮಹತ್ಯೆ ಮಾಡಿಕೊಂಡಿರಬಹುದು. ರಮ್ಯಾ ಹಾಗೂ ಉದ್ಯಮಿ ನಡುವಿನ ಸಮಸ್ಯೆ ಬಗ್ಗೆ ಪುನೀತ್ ಗೆ ತಿಳಿದಿದ್ದ ಕಾರಣಕ್ಕೆ ಕೊಲೆ ಮಾಡಿರಬಹುದು ಎಂಬ ಅನುಮಾನಗಳೂ ವ್ಯಕ್ತವಾಗಿವೆ. ಈ ಆಯಾಮದಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com