ಮಂಡ್ಯ: ವಿಸಿ ನಾಲೆಯಲ್ಲಿ ಸಿಕ್ಕ ಕಾರಿನಲ್ಲಿ ಮೂವರ ಮೃತದೇಹ ಪತ್ತೆ

ಏ.16 ರಂದು ಮಕ್ಕಳ ಜೊತೆ ಕಾರಿನಲ್ಲಿ ಬೆಂಗಳೂರಿನಿಂದ ಕೆ.ಆರ್.ನಗರಕ್ಕೆ ಹೊರಟಿದ್ದರು. ಆದರೆ ಆ ಬಳಿಕ ಅವರ ಸುಳಿವು ಇರಲಿಲ್ಲ. ಏ.19ರಂದು ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ವಿಸಿ ನಾಲೆಯಲ್ಲಿ ಸಿಕ್ಕ ಕಾರಿನಲ್ಲಿ ಮೂರು ಶವ ಪತ್ತೆ
ವಿಸಿ ನಾಲೆಯಲ್ಲಿ ಸಿಕ್ಕ ಕಾರಿನಲ್ಲಿ ಮೂರು ಶವ ಪತ್ತೆ
Updated on

ಮಂಡ್ಯ: ಕಾರಿನಲ್ಲಿ ತಂದೆ ಹಾಗೂ ಇಬ್ಬರು ಮಕ್ಕಳು ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ವಿ.ಸಿ.ನಾಲೆಯಲ್ಲಿ ನಡೆದಿದೆ. ಮೃತರನ್ನು ಮೈಸೂರು ಜಿಲ್ಲೆಯ ಕೆ.ಆರ್ .ನಗರ ತಾಲೂಕಿನ ಹೆಬ್ಬಾಳು ಗ್ರಾಮದ ಕುಮಾರಸ್ವಾಮಿ (38), ಮಕ್ಕಳಾದ ಅಧ್ವೈತ್ (8) ಹಾಗೂ ಅಕ್ಷತಾ (3) ಎಂದು ಗುರುತಿಸಲಾಗಿದೆ.

ಏ.16 ರಂದು ಮಕ್ಕಳ ಜೊತೆ ಕಾರಿನಲ್ಲಿ ಬೆಂಗಳೂರಿನಿಂದ ಕೆ.ಆರ್.ನಗರಕ್ಕೆ ಹೊರಟಿದ್ದರು. ಆದರೆ ಆ ಬಳಿಕ ಅವರ ಸುಳಿವು ಇರಲಿಲ್ಲ. ಏ.19ರಂದು ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಇದೀಗ ವಿ.ಸಿ.ನಾಲೆಯಲ್ಲಿ ಕಾರೊಂದು ಪತ್ತೆಯಾಗಿದ್ದು, ಅದರಲ್ಲಿ ತಂದೆ ಹಾಗೂ ಇಬ್ಬರ ಮಕ್ಕಳ ಮೃತದೇಹ ಪತ್ತೆಯಾಗಿದೆ. ಕಾರು ನಾಲೆಗೆ ಉರುಳಲು ನಿಖರ ಕಾರಣ ತಿಳಿದುಬಂದಿಲ್ಲ.

ಸ್ಥಳಕ್ಕೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲಿಸಿದರು. ಕೆ.ಆರ್.ಎಸ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸಿ ನಾಲೆಯಲ್ಲಿ ಸಿಕ್ಕ ಕಾರಿನಲ್ಲಿ ಮೂರು ಶವ ಪತ್ತೆ
ಮಂಡ್ಯ: ವಿಸಿ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com