ರಕ್ಷಣಾ ಬಜೆಟ್ ಗಾತ್ರ ಹೆಚ್ಚಿಸಿ, ಪಾಕಿಸ್ತಾನದ ಮೇಲೆ ಯುದ್ಧ ಘೋಷಿಸಿ: ಕೇಂದ್ರ ಸರ್ಕಾರಕ್ಕೆ ಸಿಎಂ ಆರ್ಥಿಕ ಸಲಹೆಗಾರ ಆಗ್ರಹ

ರಕ್ಷಣಾ ವಲಯದ ಬಜೆಟ್ ಗಾತ್ರವನ್ನು 6.81 ಲಕ್ಷ ಕೋಟಿ ರೂ.ಗಳಿಂದ 12 ಲಕ್ಷ ಕೋಟಿ ರೂ.ಗಳಿಗೆ ಹೆಚ್ಚಿಸಲು ಪ್ರಧಾನಿ ಮೋದಿಯವರು ಸಂಸತ್ ವಿಶೇಷ ಅಧಿವೇಶನವನ್ನು ಕರೆಯಬೇಕು.
Basvaraj Rayareddi
ಬಸವರಾಜ ರಾಯರೆಡ್ಡಿ online desk
Updated on

ಬೆಂಗಳೂರು: ರಕ್ಷಣಾ ವಲಯದ ಬಜೆಟ್ ಗಾತ್ರ ಹೆಚ್ಚಿಸಿ, ಪಾಕಿಸ್ತಾನದ ಮೇಲೆ ಯುದ್ಧ ಘೋಷಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿಯವರು ಆಗ್ರಹಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಯುದ್ಧ ಬೇಡ ಎಂದು ಹೇಳಿಲ್ಲ. ಅವರ ಹೇಳಿಕೆಯನ್ನ ತಪ್ಪಾಗಿ ಅರ್ಥೈಸಲಾಗಿದೆ. ಇದರಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದ್ದು, ಅಶೋಕ್, ವಿಜಯೇಂದ್ರ ಅವರು ಸಿಎಂ ವಿರುದ್ಧ ಮಾತನಾಡುವುದು ಸರಿಯಲ್ಲ. ಕೂಡಲೇ ಇಬ್ಬರು ತಮ್ಮ ಹೇಳಿಕೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ಸಿಎಂ ಅವರ ಹೇಳಿಕೆ ಪಾಕಿಸ್ತಾನದಲ್ಲಿ ಬಂದರೆ ಅದಕ್ಕೂ ನಮಗೂ ಸಂಬAಧವಿಲ್ಲ. ಸಿದ್ದರಾಮಯ್ಯ ಯಾವತ್ತೂ ದೇಶದ ವಿರುದ್ಧ ಮಾತಾಡಿಲ್ಲ ಎಂದು ಸಮರ್ಥಿಸಿಕೊಂಡರು.

ಇದೇ ವೇಳೆ ಪಾಕಿಸ್ತಾನದ ವಿರುದ್ಧ ಯುದ್ಧ ಘೋಷಿಸುವಂತೆ ಆಗ್ರಹಿಸಿದ ಅವರು, ರಕ್ಷಣಾ ವಲಯದ ಬಜೆಟ್ ಗಾತ್ರವನ್ನು 6.81 ಲಕ್ಷ ಕೋಟಿ ರೂ.ಗಳಿಂದ 12 ಲಕ್ಷ ಕೋಟಿ ರೂ.ಗಳಿಗೆ ಹೆಚ್ಚಿಸಲು ಪ್ರಧಾನಿ ಮೋದಿಯವರು ಸಂಸತ್ ವಿಶೇಷ ಅಧಿವೇಶನವನ್ನು ಕರೆಯಬೇಕೆಂದು ಸಲಹೆ ನೀಡಿದರು.

ಪರಿಸ್ಥಿತಿಯನ್ನು ನಿರ್ಣಯಿಸಲು ಪ್ರಧಾನಮಂತ್ರಿಗಳು ವಿರೋಧ ಪಕ್ಷದ ನಿಯೋಗವನ್ನು ಕಾಶ್ಮೀರಕ್ಕೆ ಕರೆದೊಯ್ಯಬೇಕು. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಭಯೋತ್ಪಾದಕರ ಅಡಗುತಾಣಗಳ ಮೇಲೆ ಬಾಂಬ್ ದಾಳಿ ಮಾಡಬೇಕು. ಪಾಕಿಸ್ತಾನವನ್ನು ಅಂತರರಾಷ್ಟ್ರೀಯ ನ್ಯಾಯಾಲಯಕ್ಕೂ ಎಳೆದೊಯ್ಯಬೇಕೆಂದು ಒತ್ತಾಯಿಸಿದರು.

Basvaraj Rayareddi
ಪಾಕಿಸ್ತಾನ ಮೇಲೆ ಯುದ್ಧ ಬೇಡ ಎಂದು ನಾನು ಹೇಳಿಲ್ಲ: ವರಸೆ ಬದಲಿಸಿದ ಸಿದ್ದರಾಮಯ್ಯ; ಡಿ.ಕೆ ಶಿವಕುಮಾರ್ ಹೇಳಿದ್ದೇನು?

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com