ತುಷಾರ್ ಗಿರಿನಾಥ್ ವರ್ಗಾವಣೆ: BMRCL ಮುಖ್ಯಸ್ಥ ಮಹೇಶ್ವರ್ ರಾವ್ BBMP ನೂತನ ಸಾರಥಿ

ಈ ಕುರಿತು ಸೋಮವಾರ ರಾಜ್ಯ ಸರಕಾರ ಅಧಿಸೂಚನೆಯನ್ನು ಹೊರಡಿಸಿದೆ. ನಗರಾಭಿವೃದ್ಧಿ ಇಲಾಖೆ ಹಾಗೂ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಉಮಾಶಂಕರ್ ಎಸ್.ಆರ್ ಎಪ್ರಿಲ್ 30ರಂದು ನಿವೃತ್ತಿಯಾಗಲಿದ್ದಾರೆ.
Maheshwar Rao
ಮಹೇಶ್ವರ್ ರಾವ್
Updated on

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್ ಅವರನ್ನು ಬದಲಾವಣೆ ಮಾಡಲಾಗಿದ್ದು. ಹೊಸ ಬಿಬಿಎಂಪಿ ಮುಖ್ಯ ಆಯುಕ್ತರನ್ನಾಗಿ ಮಹೇಶ್ವರ ರಾವ್ ಅವರನ್ನು ನೇಮಕ ಮಾಡಲಾಗಿದೆ.

ಈ ಕುರಿತು ಸೋಮವಾರ ರಾಜ್ಯ ಸರಕಾರ ಅಧಿಸೂಚನೆಯನ್ನು ಹೊರಡಿಸಿದೆ. ನಗರಾಭಿವೃದ್ಧಿ ಇಲಾಖೆ ಹಾಗೂ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಉಮಾಶಂಕರ್ ಎಸ್. ಆರ್. ಎಪ್ರಿಲ್ 30ರಂದು ನಿವೃತ್ತಿಯಾಗಲಿದ್ದಾರೆ.

ಹೀಗಾಗಿ ಬಿಬಿಎಂಪಿ ಮುಖ್ಯ ಆಯುಕ್ತರಾಗಿದ್ದ ತುಷಾರ್ ಗಿರಿನಾಥ್ ಅವರನ್ನು ಏಪ್ರಿಲ್ 30ರಿಂದ ಜಾರಿಗೆ ಬರುವಂತೆ ನಗರಭಿವೃದ್ಧಿ ಇಲಾಖೆ ಹಾಗೂ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದೆ. ಮಹೇಶ್ವರ್‌ ರಾವ್‌ ಅವರು BMRCL ವ್ಯವಸ್ಥಾಪಕ ನಿರ್ದೇಶಕರಾಗಿದ್ದು, ಅವರಿಗೆ ಹೆಚ್ಚುವರಿ ಜವಾಬ್ದಾರಿ ಕೊಡಲಾಗಿದೆ. 1995ನೇ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದಾರೆ.

ಬಿಬಿಎಂಪಿಗೆ ಕಳೆದ 5 ವರ್ಷಗಳಿಂದ ಚುನಾವಣೆ ನಡೆದಿಲ್ಲ. ಕಳೆದ 5 ವರ್ಷಗಳಿಂದಲೂ ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ಆಡಳಿತಾಧಿಕಾರಿಯ ಮೂಲಕ ಆಡಳಿತ ನಡೆಯುತ್ತಿದೆ. ಬೆಂಗಳೂರಿಗೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ಮುಖ್ಯ ಆಯುಕ್ತರು ಹಾಗೂ ಆಡಳಿತಾಧಿಕಾರಿಗಳೇ ತೆಗೆದುಕೊಳ್ಳುತ್ತಿದ್ದಾರೆ. ಇನ್ನು ಬಿಬಿಎಂಪಿಯ ಮುಖ್ಯ ಆಯುಕ್ತರಾಗಿ ತುಷಾರ್ ಗಿರಿನಾಥ್ ಅವರು ಕಳೆದ ಎರಡೂವರೆ ವರ್ಷಗಳಿಂದ ಸೇವೆ ಸಲ್ಲಿಸಿದ್ದಾರೆ.

Maheshwar Rao
ಬಿಬಿಎಂಪಿಗೆ ಹೊಸ ಮುಖ್ಯ ಆಯುಕ್ತರ ನೇಮಕ: ರೇಸ್ ನಲ್ಲಿ ಮಣಿವಣ್ಣನ್-ಮಹೇಶ್ವರ್ ರಾವ್; 'ಡೆಮಾಲಿಷನ್ ಮ್ಯಾನ್'ಗೆ ಹುದ್ದೆ ಸಾಧ್ಯತೆ?

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com