ಕಾಂಗ್ರೆಸ್ ರ‍್ಯಾಲಿ ವೇಳೆ ಭದ್ರತಾ ವೈಫಲ್ಯ: ವರದಿ ಕೋರಿದ ಸಚಿವ ಪರಮೇಶ್ವರ್

ಘಟನೆಯ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ. ಬಿಜೆಪಿ ಮಹಿಳಾ ಸದಸ್ಯರು ಕಾಂಗ್ರೆಸ್ ಶಾಲು ಧರಿಸಿ ಸ್ಥಳಕ್ಕೆ ಬಂದಿದ್ದು, ಸಿಎಂ ಮಾತನಾಡುವಾಗ ಅವರು ಕಪ್ಪು ಬಾವುಟಗಳನ್ನು ಪ್ರದರ್ಶಿಸಿದ್ದಾರೆ.
CM Siddaramaiah, Home Minister Dr. G. Parameshwar
ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ. ಪರಮೇಶ್ವರ್
Updated on

ಬೆಂಗಳೂರು: ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ರ‍್ಯಾಲಿಯಲ್ಲಿ ಭದ್ರತಾ ಲೋಪವಾಗಿದೆಯೇ ಎಂದು ಪರಿಶೀಲಿಸಿ ವರದಿ ಸಲ್ಲಿಸುವಂತೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಗೆ (ಕಾನೂನು ಮತ್ತು ಸುವ್ಯವಸ್ಥೆ) ಸೂಚನೆ ನೀಡಲಾಗಿದೆ ಎಂದು ಸಚಿವ ಪರಮೇಶ್ವರ್ ಅವರು ಮಂಗಳವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ. ಬಿಜೆಪಿ ಮಹಿಳಾ ಸದಸ್ಯರು ಕಾಂಗ್ರೆಸ್ ಶಾಲು ಧರಿಸಿ ಸ್ಥಳಕ್ಕೆ ಬಂದಿದ್ದು, ಸಿಎಂ ಮಾತನಾಡುವಾಗ ಅವರು ಕಪ್ಪು ಬಾವುಟಗಳನ್ನು ಪ್ರದರ್ಶಿಸಿದ್ದಾರೆ. ಹೀಗಾಗಿ ಇಲಾಖೆಯಿಂದ ಯಾವುದೇ ಲೋಪವಾಗಿದೆಯೇ ಎಂದು ಪರಿಶೀಲಿಸಿ ವರದಿ ನೀಡುವಂತೆ ಎಡಿಜಿಪಿ (ಎಲ್ & ಒ) ಅವರಿಗೆ ನಿರ್ದೇಶನ ನೀಡಿದ್ದೇನೆಂದು ಹೇಳಿದರು.

ಪಾಕಿಸ್ತಾನದೊಂದಿಗೆ ಯುದ್ಧದ ಅಗತ್ಯವಿಲ್ಲ ಎಂಬ ಸಿಎಂ ಹೇಳಿಕೆಗೆ ಕ್ಷಮೆಯಾಚಿಸಬೇಕೆಂದು ವಿರೋಧ ಪಕ್ಷದ ಬಿಜೆಪಿ ಆಗ್ರಹ ಕುರಿತು ಮಾತನಾಡಿ, ಯುದ್ಧಕ್ಕೆ ಹಿಂಜರಿಯಬಾರದು ಎಂದು ಸಿಎಂ ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು.

ನವದೆಹಲಿಯಲ್ಲಿ ನಡೆದ ಸರ್ವಪಕ್ಷ ನಾಯಕರ ಸಭೆಯಲ್ಲಿ, ಹಿರಿಯ ಕಾಂಗ್ರೆಸ್ ನಾಯಕರು ಈಗಾಗಲೇ ಪಕ್ಷದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಎಲ್ಲಾ ನಾಯಕರು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಮಾತನಾಡುವುದು ಸರಿಯಲ್ಲ. ಇದು ರಾಷ್ಟ್ರೀಯ ಭದ್ರತಾ ವಿಷಯವಾಗಿದ್ದು, ಅವರು ಕೇಂದ್ರ ಸರ್ಕಾರಕ್ಕೆ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

CM Siddaramaiah, Home Minister Dr. G. Parameshwar
ಹೆಚ್ಚುವರಿ ಎಸ್‌ಪಿ ವಿರುದ್ಧ ಸಿಎಂ ಗರಂ; ವೇದಿಕೆಯಲ್ಲೇ ಕಪಾಳಮೋಕ್ಷ ಮಾಡಲು ಮುಂದಾಗಿದ್ದ ಸಿದ್ದರಾಮಯ್ಯ!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com