ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಬಿಜೆಪಿ ಮೌನ?: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದು ಹೀಗೆ...

ಯಾರೇ ಅಪರಾಧ ಮಾಡಿದರೂ ಶಿಕ್ಷೆಯಾಗಬೇಕು ಎಂದು ಬಿಜೆಪಿ ಯಾವಾಗಲೂ ಪ್ರತಿಪಾದಿಸುತ್ತದೆ. ದೇಶದಲ್ಲಿ ಕಾನೂನಿದ್ದು, ಯಾರೇ ತಪ್ಪು ಮಾಡಿದರೂ, ಅಪರಾಧ ಎಸಗಿದ್ದರೂ ನ್ಯಾಯಾಲಯ ಪರಿಶೀಲನೆ ನಡೆಸಿ ತೀರ್ಪು ನೀಡಿದೆ.
Prajwal Revanna, Pralhad Joshi
ಪ್ರಜ್ವಲ್ ರೇವಣ್ಣ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಾಂದರ್ಭಿಕ ಚಿತ್ರ
Updated on

ಹುಬ್ಬಳ್ಳಿ: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಬಗ್ಗೆ ಬಿಜೆಪಿ ಯಾವತ್ತೂ ಮೌನವಾಗಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಭಾನುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೇ ಅಪರಾಧ ಮಾಡಿದರೂ ಶಿಕ್ಷೆಯಾಗಬೇಕು ಎಂದು ಬಿಜೆಪಿ ಯಾವಾಗಲೂ ಪ್ರತಿಪಾದಿಸುತ್ತದೆ. ದೇಶದಲ್ಲಿ ಕಾನೂನಿದ್ದು, ಯಾರೇ ತಪ್ಪು ಮಾಡಿದರೂ, ಅಪರಾಧ ಎಸಗಿದ್ದರೂ ನ್ಯಾಯಾಲಯ ಪರಿಶೀಲನೆ ನಡೆಸಿ ತೀರ್ಪು ನೀಡಿದೆ. ಅದನ್ನು ಎಲ್ಲರೂ ಒಪ್ಪಿಕೊಳ್ಳಬೇಕು ಎಂದರು.

ಜೆಡಿಎಸ್ ಜೊತೆಗಿನ ಮೈತ್ರಿಯಿಂದಾಗಿ ಬಿಜೆಪಿ ಈ ವಿಚಾರದಲ್ಲಿ ಮೌನ ವಹಿಸುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಾವು ಎಲ್ಲಿ ಮೌನವಾಗಿದ್ದೇವೆ? ನಾವು ಯಾಕೆ ಮೌನವಾಗಿರಬೇಕು. ನಾನು ಈಗಾಗಲೇ ಅದರ ಬಗ್ಗೆ ಮಾತನಾಡಿದ್ದೇನೆ ಎಂದರು.

ಯಾರಾದರೂ ತಪ್ಪು ಮಾಡಿದರೆ ಕ್ರಮ ಎದುರಿಸಬೇಕಾಗುತ್ತದೆ. ಇಂತಹ ಘೋರ ಅಪರಾಧ ಮಾಡಿದವರು ಕಾಂಗ್ರೆಸ್ ಪಕ್ಷದಲ್ಲಿ ಇಲ್ಲವೇ ಮತ್ತು ಅವರು ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದರು? ಅವರು ಪ್ರಧಾನಿ ಜೊತೆಗಿದ್ದರು. ಯಾಸಿನ್ ಮಲಿಕ್ ಆಗಿನ ಪ್ರಧಾನಿ ಜೊತೆಗಿದ್ದರು. ಅನೇಕ ಜನರಿದ್ದಾರೆ. ನಾನು ಹೆಚ್ಚು ಜನರನ್ನು ಹೆಸರಿಸಲು ಬಯಸುವುದಿಲ್ಲ ಎಂದು ಜೋಶಿ ಟೀಕಿಸಿದರು.

Prajwal Revanna, Pralhad Joshi
ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ; ತನಿಖಾ-ಪ್ರಾಸಿಕ್ಯೂಷನ್ ತಂಡಗಳಿಗೆ ಪರಮೇಶ್ವರ ಅಭಿನಂದನೆ

ಆಗಸ್ಟ್ 5 ರಂದು ಬೆಂಗಳೂರು ರಾಹುಲ್ ಗಾಂಧಿ ಪ್ರತಿಭಟನೆ ಕುರಿತು ಆಶ್ಚರ್ಯ ವ್ಯಕ್ತಪಡಿಸಿದ ಪ್ರಲ್ಹಾದ್ ಜೋಶಿ, ಕಾಂಗ್ರೆಸ್ ಚುನಾವಣೆಯಲ್ಲಿ ಗೆದ್ದಾಗಲೆಲ್ಲಾ ದೂರು ನೀಡುವುದಿಲ್ಲ ಆದರೆ ಚುನಾವಣೆಯಲ್ಲಿ ಸೋತಿದ್ದಕ್ಕೆ ವಿದ್ಯುನ್ಮಾನ ಮತಯಂತ್ರಗಳು ಅಥವಾ ಚುನಾವಣಾ ಆಯೋಗವನ್ನೇ ದೂಷಿಸುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com