ಚಿತ್ರದುರ್ಗ: ಬಸ್ ಗಳ ನಡುವೆ ಸಿಲುಕಿ ಆಟೋ ನಜ್ಜುಗುಜ್ಜು! ನಾಲ್ವರು ಪ್ರಾಣಾಪಾಯದಿಂದ ಪಾರು; Video

ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
Accident Photo
ಅಪಘಾತದ ಚಿತ್ರ
Updated on

ಚಿತ್ರದುರ್ಗ: ಎರಡು ಬಸ್ ಗಳ ನಡುವೆ ಸಿಲುಕಿ ಆಟೋ ನಜ್ಜುಗುಜ್ಜಾದರೂ ನಾಲ್ವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಗರದ ಪ್ರಧಾನ ಅಂಚೆ ಕಚೇರಿ ಬಳಿ ಸೋಮವಾರ ಸಂಜೆ ನಡೆದಿದೆ.

ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಟೋರಿಕ್ಷಾಕ್ಕೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿರುವುದನ್ನು ಸಿಸಿಟಿವಿ ದೃಶ್ಯಾವಳಿಗಳು ತೋರಿಸಿವೆ.

ಪರಿಣಾಮ ಎರಡು ಬಸ್ ಗಳ ನಡುವೆ ಸಿಲುಕಿದ ಆಟೋ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ನಾಲ್ಕು ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡವರನ್ನು ನವೀನ್, ಪೂಜಾ, ನಿಂಗರಾಜು ಮತ್ತು ಮಹಾಂತೇಶ್ ಎಂದು ಗುರುತಿಸಲಾಗಿದೆ.

ನಾಲ್ವರು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ. ಖಾಸಗಿ ಬಸ್ ನಿಂದಲೇ ಅಪಘಾತವಾಗಿದ್ದು, ಸಂಚಾರಿ ಪೊಲೀಸರು ದೂರು ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Accident Photo
ಬಿಗ್‌ ಬಾಸ್‌ ಖ್ಯಾತಿಯ ರಕ್ಷಕ್‌ ಬುಲೆಟ್‌ ಎಡವಟ್ಟು: ಬೈಕ್ ಗೆ ಥಾರ್ ಕಾರು ಡಿಕ್ಕಿ; ಯುವಕನ ಕಾಲು ಮುರಿತ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com