ಬಾಗಲಕೋಟೆ: ಜಾತಿ ತಾರತಮ್ಯ, ನಿಂದನೆ ಆರೋಪ; ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಶಾಲೆಯಿಂದ ನವನಗರ ಪೊಲೀಸ್ ಠಾಣೆವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಪ್ರಾಂಶುಪಾಲರನ್ನು ಕೂಡಲೇ ವರ್ಗಾವಣೆ ಮಾಡಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದರು.
Student Protest
ವಿದ್ಯಾರ್ಥಿಗಳ ಪ್ರತಿಭಟನೆ
Updated on

ಬಾಗಲಕೋಟೆ: ಶಾಲೆಗೆ ಮೂಲಸೌಕರ್ಯ ಒದಗಿಸುವಲ್ಲಿ ವಿಫಲವಾಗಿರುವ ಪ್ರಾಂಶುಪಾಲರು ಜಾತಿ ತಾರತಮ್ಯ ಮಾಡುತ್ತಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಪ್ರಾಂಶುಪಾಲರಾದ ಗೀತಾ ಕಾಪಸೆ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಬಾಲಕರು ಮತ್ತು ಬಾಲಕಿಯರು ಭಾಗವಹಿಸಿದ್ದರು.

ಶಾಲೆಯಿಂದ ನವನಗರ ಪೊಲೀಸ್ ಠಾಣೆವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಪ್ರಾಂಶುಪಾಲರನ್ನು ಕೂಡಲೇ ವರ್ಗಾವಣೆ ಮಾಡಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದರು.

ಬ್ಲಾಕ್ ಶಿಕ್ಷಣಾಧಿಕಾರಿ ಎಂಎಸ್ ಬಡದಾನಿ ಶಾಲೆಗೆ ಭೇಟಿ ನೀಡಿ ದೂರುಗಳನ್ನು ಸ್ವೀಕರಿಸಿದರು. ಪರಿಸ್ಥಿತಿ ಶಾಂತಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯೋನ್ಮುಖರಾಗಿದ್ದು, ಪ್ರಾಂಶುಪಾಲರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಶಾಲೆಯಲ್ಲಿ ಶುದ್ಧ ಕುಡಿಯುವ ನೀರು ಇಲ್ಲ. ತರಗತಿ ಕೊಠಡಿಗಳಲ್ಲಿ ಸರಿಯಾದ ಗಾಳಿ ಮತ್ತು ಶೌಚಾಲಯ ಇಲ್ಲದೆ ನೈರ್ಮಲ್ಯದ ಕೊರತೆ ಹೆಚ್ಚಾಗಿದೆ. ಮೊಟ್ಟೆ, ಬಾಳೆಹಣ್ಣಿನ ಕಳಪೆ ವಿತರಣೆ ಸೇರಿದಂತೆ ಮಧ್ಯಾಹ್ನದ ಊಟದ ಯೋಜನೆಯಲ್ಲಿನ ಅಕ್ರಮಗಳ ಬಗ್ಗೆಯೂ ವಿದ್ಯಾರ್ಥಿಗಳು ದೂರು ನೀಡಿದರು.

Student Protest
ಅವ್ಯವಸ್ಥೆಗಳ ಆಗರವಾದ ಬೆಂಗಳೂರು ವಿವಿ: ನೀರು, ವಿದ್ಯುತ್ ಇಲ್ಲದೆ ಪರದಾಟ, ಬೀದಿಗಿಳಿದು ವಿದ್ಯಾರ್ಥಿಗಳ ಪ್ರತಿಭಟನೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com