ಶಿವಮೊಗ್ಗ: ತುಂಗಾ ನದಿ ಸೇತುವೆ ಮೇಲೆ ರೈಲು ಎಂಜಿನಿಂದ ಬೇರ್ಪಟ್ಟ ಬೋಗಿಗಳು; ತಪ್ಪಿದ ದುರಂತ

16 ಬೋಗಿಗಳನ್ನು ಒಳಗೊಂಡ ರೈಲು ತಾಳಗುಪ್ಪದಿಂದ ಮೈಸೂರಿಗೆ ಹೋಗುತ್ತಿದ್ದಾಗ ಬೋಗಿಗಳ ನಡುವಿನ ಸಂಪರ್ಕ ಕೊಂಡಿ ಕಳಚಿಬಿದ್ದ ಘಟನೆ ಇಂದು ಸಂಜೆ ನಡೆದಿದೆ.
Train coaches uncouple
ರೈಲಿನಿಂದ ಬೇರ್ಪಟ್ಟ ಬೋಗಿಗಳು
Updated on

ಶಿವಮೊಗ್ಗ: ತುಂಗಾ ನದಿ ಸೇತುವೆಯ ಮೇಲೆ ತಾಳಗುಪ್ಪ-ಮೈಸೂರು ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ ರೈಲಿನ ಆರು ಬೋಗಿಗಳು ಎಂಜಿನಿಂದ ಬೇರ್ಪಟ್ಟ ಘಟನೆ ಬುಧವಾರ ಸಂಜೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ದೊಡ್ಡ ದುರಂತವೊಂದು ತಪ್ಪಿದೆ.

16 ಬೋಗಿಗಳನ್ನು ಒಳಗೊಂಡ ರೈಲು ತಾಳಗುಪ್ಪದಿಂದ ಮೈಸೂರಿಗೆ ಹೋಗುತ್ತಿದ್ದಾಗ ಬೋಗಿಗಳ ನಡುವಿನ ಸಂಪರ್ಕ ಕೊಂಡಿ ಕಳಚಿಬಿದ್ದ ಘಟನೆ ಇಂದು ಸಂಜೆ ನಡೆದಿದೆ.

ಶಿವಮೊಗ್ಗ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿ, ತಾಂತ್ರಿಕ ದೋಷದಿಂದಾಗಿ ಆರು ಬೋಗಿಗಳು ರೈಲಿನ ಉಳಿದ ಭಾಗದಿಂದ ಬೇರ್ಪಟ್ಟವು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

Train coaches uncouple
Himachal Pradesh: ರೈಲು ಚಲಿಸಿದ ಬಳಿಕ ಸೇತುವೆ ಅಡಿಪಾಯ ಕುಸಿತ; ತಪ್ಪಿದ ಮಹಾ ದುರಂತ; Video

ಮುಂಭಾಗವು ಮುಂದೆ ಚಲಿಸುತ್ತಲೇ ಇದ್ದಾಗ, ಹಿಂಭಾಗದ ಬೋಗಿಗಳು ತುಂಗಾ ಸೇತುವೆಯ ಮೇಲೆ ನಿಂತಿದ್ದವು, ಇದು ಪ್ರಯಾಣಿಕರಲ್ಲಿ ತೀವ್ರ ಆತಂಕವನ್ನು ಉಂಟುಮಾಡಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಯಾರಿಗೂ ಯಾವುದೇ ಗಾಯಗಳು ಅಥವಾ ಹಾನಿ ಸಂಭವಿಸಿಲ್ಲ ಎಂದು ಅವರು ದೃಢಪಡಿಸಿದ್ದಾರೆ.

ರೈಲ್ವೆ ಸಿಬ್ಬಂದಿ ಬೇರ್ಪಟ್ಟ ಬೋಗಿಗಳನ್ನು ಮತ್ತೆ ಜೋಡಿಸಿದರು ಮತ್ತು ರೈಲು ತನ್ನ ಪ್ರಯಾಣವನ್ನು ಪುನರಾರಂಭಿಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com