ರಾಜ್ಯಾದ್ಯಂತ ಮತದಾರರ ಪಟ್ಟಿ ಪರಿಶೀಲನೆ ನಡೆಸಿ: SEC ಗೆ ಕಾಂಗ್ರೆಸ್ ಒತ್ತಾಯ

ಕಾಂಗ್ರೆಸ್ ನಿಯೋಗವು ಮಹದೇವಪುರ ಮತ್ತು ಇತರ ಕ್ಷೇತ್ರಗಳ ಉದಾಹರಣೆಗಳನ್ನು ಉಲ್ಲೇಖಿಸಿ ನಕಲಿ ಮತದಾರರ ನಮೂದುಗಳ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಎಂದು ಹೇಳಿದರು.
Representational image
ಸಾಂದರ್ಭಿಕ ಚಿತ್ರ
Updated on

ರಾಜ್ಯಾದ್ಯಂತ ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕಾಂಗ್ರೆಸ್ ಚುನಾವಣಾ ಆಯೋಗವನ್ನು ಔಪಚಾರಿಕವಾಗಿ ವಿನಂತಿ ಮಾಡಿಕೊಂಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ಜ್ಞಾಪಕ ಪತ್ರವನ್ನು ಸಲ್ಲಿಸಿದ ನಂತರ, ಸುದ್ದಿಗಾರರೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್, ಕಾಂಗ್ರೆಸ್ ನಿಯೋಗವು ಮಹದೇವಪುರ ಮತ್ತು ಇತರ ಕ್ಷೇತ್ರಗಳ ಉದಾಹರಣೆಗಳನ್ನು ಉಲ್ಲೇಖಿಸಿ ನಕಲಿ ಮತದಾರರ ನಮೂದುಗಳ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಎಂದು ಹೇಳಿದರು.

ಐದರಿಂದ ಆರು ಕ್ಷೇತ್ರಗಳನ್ನು ಮಾತ್ರ ವಿವರವಾಗಿ ಪರಿಶೀಲಿಸಲಾಗಿದ್ದರೂ, ರಾಜ್ಯಾದ್ಯಂತ ಇತರ ಕ್ಷೇತ್ರಗಳಲ್ಲಿ ಇದೇ ರೀತಿಯ ಅಕ್ರಮಗಳು ನಡೆದಿರುವ ಸಾಧ್ಯತೆಯಿದೆ. ನಾವು ಮಹದೇವಪುರ ಅಥವಾ ಗಾಂಧಿನಗರದಿಂದ ವಿವರವಾದ ಉದಾಹರಣೆಗಳನ್ನು ಸಲ್ಲಿಸಲಿಲ್ಲ, ಸಂಪೂರ್ಣ ಲೆಕ್ಕಪರಿಶೋಧನೆ ನಡೆಸುವಂತೆ ನಾವು ಆಯೋಗವನ್ನು ವಿನಂತಿ ಮಾಡಿಕೊಂಡಿದ್ದೇವೆ ಎಂದರು.

Representational image
ಮತಕಳ್ಳತನ: ರಾಹುಲ್ ಗಾಂಧಿ ಆರೋಪಗಳ ಬಗ್ಗೆ ಮುಖ್ಯ ಚುನಾವಣಾಧಿಕಾರಿಯಿಂದ ತನಿಖೆಗೆ ಒಪ್ಪಿಗೆ- DK Shivakumar

ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಆರೋಪಗಳ ಕುರಿತು ನಮಗೆ ಯಾವುದೇ ದಾಖಲೆಗಳು ಸಿಕ್ಕಿಲ್ಲ. ನಾವು ದಾಖಲೆಗಳನ್ನು ಪಡೆದಾಗ ಪರಿಶೀಲಿಸಬಹುದು. ಅದಕ್ಕಾಗಿಯೇ ನಾವು ರಾಹುಲ್ ಗಾಂಧಿಯವರಿಗೆ ಪತ್ರ ಬರೆದಿದ್ದೇವೆ. ಇಲ್ಲಿಯವರೆಗೆ ನಮಗೆ ಜ್ಞಾಪಕ ಪತ್ರ ಮಾತ್ರ ಬಂದಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com