ಧರ್ಮಸ್ಥಳ ಪ್ರಕರಣ: NHRC ಅಧಿಕಾರಿಗಳ ತನಿಖೆ, ವಿವಿಧ ಸ್ಥಳಗಳಿಗೆ ಭೇಟಿ, ದಾಖಲೆಗಳ ಸಂಗ್ರಹ!

ಬೆಳ್ತಂಗಡಿ ತಾಲೂಕಿಗೆ ಆಗಮಿಸಿದ ನಾಲ್ವರು ಸದಸ್ಯರನ್ನೊಳಗೊಂಡ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಂಗಳವಾರ ತನಿಖೆ ಆರಂಭಿಸಿದೆ.
ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಅಧಿಕಾರಿಗಳು
NHRC ಅಧಿಕಾರಿಗಳು
Updated on

ಮಂಗಳೂರು: ಧರ್ಮಸ್ಥಳದಲ್ಲಿ ಸಾಮೂಹಿಕವಾಗಿ ಶವಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪ ಕುರಿತಂತೆ ಇದೀಗ ಮಾನವ ಹಕ್ಕಗಳ ಆಯೋಗವೂ ತನಿಖೆ ಆರಂಭಿಸಿದೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳಕ್ಕೆ ಆಗಮಿಸಿದ ನಾಲ್ವರು ಸದಸ್ಯರನ್ನೊಳಗೊಂಡ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಂಗಳವಾರ ತನಿಖೆ ಆರಂಭಿಸಿದೆ.

ಈ ಸಂಬಂಧ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿರುವ ಆಯೋಗ, ಧರ್ಮಸ್ಥಳದ ದೇವಾಲಯದ ಆವರಣ, ಗ್ರಾಮ ಪಂಚಾಯಿತಿ ಕಚೇರಿ, ಸ್ಥಳೀಯ ಪೊಲೀಸ್ ಕಚೇರಿ, SIT ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ತನಿಖೆ ಪರಿಶೀಲನೆ ನಡೆಸಿತು.

ಆರಂಭಿಕವಾಗಿ ಹಿರಿಯ ಪೊಲೀಸ್ ಅಧೀಕ್ಷಕ ಯುವರಾಜ್ ನೇತೃತ್ವದ NHRC ತಂಡವು ದಶಕಗಳ ಕಾಲದ ಅಸಹಜ ಸಾವಿನ ಪ್ರಕರಣಗಳ ದಾಖಲೆಗಳನ್ನು ಸಂಗ್ರಹಿಸಿದೆ. ಪೌರ ಕಾರ್ಮಿಕರು ಮತ್ತಿತರ ಸಂಬಂಧಿತ ವ್ಯಕ್ತಿಗಳು ಹೇಳಿಕೆಗಳನ್ನು ಒದಗಿಸಿದ್ದಾರೆ. ಈ ತನಿಖೆ ನಾಲ್ಕೈದು ದಿನಗಳ ಕಾಲ ನಡೆಯುವ ನಿರೀಕ್ಷೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಅಧಿಕಾರಿಗಳು
ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ದೂರುದಾರ ವ್ಯಕ್ತಿಯ ವಿರುದ್ಧ ಸಿಡಿದೆದ್ದ ಭಕ್ತರು, ಪ್ರತಿಭಟನೆ

ಧರ್ಮಸ್ಥಳದ ನೇತ್ರಾ ನದಿ ದಡದಲ್ಲಿ ಅನೇಕ ಮಹಿಳೆಯರು ಮತ್ತು ಅಪ್ರಾಪ್ತ ಬಾಲಕಿಯರ ಶವಗಳನ್ನು ನನ್ನಿಂದ ಬಲವಂತವಾಗಿ ಹೂಳಿಸಲಾಗಿದೆ ಎಂಬ ಅನಾಮಿಕ ಸಾಕ್ಷಿದಾರನ ಹೇಳಿಕೆ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com