Leopard Attack
ಚಿರತೆ ದಾಳಿ

Bannerghatta ಸಫಾರಿ ವೇಳೆ ಕಾರು ಬೆನ್ನಟ್ಟಿ, ಬಾಲಕನ ಕೈ ಮಾಂಸ ಕಿತ್ತು ಬರುವಂತೆ ಪರಚಿದ ಚಿರತೆ, Video

ಬನ್ನೇರುಘಟ್ಟದ ಜೈವಿಕ ಉದ್ಯಾನವನದ ಸಫಾರಿ ವೇಳೆ ಚಿರತೆಯೊಂದು ಬಾಲಕನ ಮೇಲೆ ದಾಳಿ ಮಾಡಿರುವ ಘಟನೆ ನಡೆದಿದೆ.
Published on

ಬೆಂಗಳೂರು: ಬನ್ನೇರುಘಟ್ಟದ ಜೈವಿಕ ಉದ್ಯಾನವನದ ಸಫಾರಿ ವೇಳೆ ಚಿರತೆಯೊಂದು ಬಾಲಕನ ಮೇಲೆ ದಾಳಿ ಮಾಡಿರುವ ಘಟನೆ ನಡೆದಿದೆ. 79ನೇ ಸ್ವಾತಂತ್ರೋತ್ಸವ ದಿನದ ಹಿನ್ನೆಲೆಯಲ್ಲಿ ಕುಟುಂಬವೊಂದು ಸಫಾರಿಗೆ ತೆರಳಿತ್ತು. ಇಂದು ಮಧ್ಯಾಹ್ನ ರಸ್ತೆಯಲ್ಲಿ ಚಿರತೆಯನ್ನು ನೋಡಿದ ಚಾಲಕ ಬೊಲೆರೋ ಕಾರುನ್ನು ನಿಲ್ಲಿಸಿದ್ದಾನೆ. ನಂತರ ನಿಧಾನವಾಗಿ ಬೊಲೆರೋ ಮುಂದಕ್ಕೆ ಹೋಗುತ್ತಿದ್ದಾಗ ಹಿಂಬಾಲಿಸಿದ ಚಿರತೆ ಕಿಟಕಿಯ ಮೂಲಕ ಕೈ ಹಾಕಿ ಉಗುರಿನಿಂದ 13 ವರ್ಷದ ಬಾಲಕನಿಗೆ ಮಾಂಸ ಕಿತ್ತು ಬರುವಂತೆ ಕೈಗೆ ಪರಚಿದೆ. ಸದ್ಯ ಗಾಯಾಳು ಬಾಲಕನಿಗೆ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಇನ್ನು ಚಿರತೆ ದಾಳಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com