ಮೈಸೂರು ವಿಶ್ವವಿದ್ಯಾನಿಲಯದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು: ಪಿಂಚಣಿಗಾಗಿ ನಿವೃತ್ತ ಸಿಬ್ಬಂದಿ ಅಲೆದಾಟ

ಮಂಡ್ಯ ಮತ್ತು ಚಾಮರಾಜನಗರವನ್ನು ಪ್ರತ್ಯೇಕ ವಿಶ್ವವಿದ್ಯಾಲಯಗಳಾಗಿ ವಿಂಗಡಿಸಿದಾಗಿನಿಂದ, ಸ್ನಾತಕೋತ್ತರ ಕೋರ್ಸ್‌ಗಳ ಕಾಲೇಜುಗಳಾಗಿ ವಿಭಜಿಸಲಾಗಿತ್ತು, ಹೀಗಾಗಿ ಮೈಸೂರು ವಿಶ್ವವಿದ್ಯಾಲಯಕ್ಕೆ ಹಣ ಒದಗಿಸಲು ಸಾಧ್ಯವಾಗಿಲ್ಲ.
ಮೈಸೂರು ವಿಶ್ವವಿದ್ಯಾನಿಲಯದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು: ಪಿಂಚಣಿಗಾಗಿ  ನಿವೃತ್ತ ಸಿಬ್ಬಂದಿ ಅಲೆದಾಟ
Updated on

ಮೈಸೂರು: ಶತಮಾನಗಳಷ್ಟು ಹಳೆಯ ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ತಮ್ಮ ಪಿಂಚಣಿ ಪಡೆಯಲು ಹೆಣಗಾಡುತ್ತಿದ್ದಾರೆ. ಈ 1,900 ಪಿಂಚಣಿದಾರರು, ವಿಶ್ವವಿದ್ಯಾಲಯ ಆಡಳಿತವನ್ನು ಸಂಪರ್ಕಿಸುವುದರ ಜೊತೆಗೆ, ಸರ್ಕಾರಕ್ಕೆ ಮಧ್ಯಪ್ರವೇಶಿಸುವಂತೆ ಪತ್ರ ಬರೆದಿದ್ದಾರೆ.

ಇದುವರೆಗೂ ಪಿಂಚಣಿಗಳನ್ನು ನಿಯಮಿತವಾಗಿ ಪಾವತಿಸಲಾಗಿತ್ತು. ಏಪ್ರಿಲ್‌ನಲ್ಲಿ ಒಂದು ವಾರ ವಿಳಂಬವಾಗಿತ್ತು. ಆದರೆ ಆಗಸ್ಟ್ 15 ರವರೆಗೆ ಹಣ ಪಾವತಿಸಿಲ್ಲ. ರಾಜ್ಯಾದ್ಯಂತದ ವಿಶ್ವವಿದ್ಯಾಲಯಗಳು ಪಿಂಚಣಿ ಪಾವತಿಸಲು ತಮ್ಮದೇ ಆದ ಆದಾಯವನ್ನು ಗಳಿಸಬೇಕು ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಆದರೆ ಮಂಡ್ಯ ಮತ್ತು ಚಾಮರಾಜನಗರವನ್ನು ಪ್ರತ್ಯೇಕ ವಿಶ್ವವಿದ್ಯಾಲಯಗಳಾಗಿ ವಿಂಗಡಿಸಿದಾಗಿನಿಂದ, ಸ್ನಾತಕೋತ್ತರ ಕೋರ್ಸ್‌ಗಳನ್ನು ನೀಡುವ ಕಾಲೇಜುಗಳಾಗಿ ವಿಭಜಿಸಲಾಗಿತ್ತು, ಹೀಗಾಗಿ ಮೈಸೂರು ವಿಶ್ವವಿದ್ಯಾಲಯಕ್ಕೆ ಸಾಧ್ಯವಾಗಿಲ್ಲ.

ಮೈಸೂರು ವಿಶ್ವವಿದ್ಯಾಲಯವು 2025-26 ರ ಬಜೆಟ್ ಅಂದಾಜಿನಲ್ಲಿ, ಸರ್ಕಾರವು ಪಿಂಚಣಿ ಅನುದಾನವಾಗಿ ರೂ 157.54 ಕೋಟಿಗಳ ಬೇಡಿಕೆ ಇಡಲಾಗಿತ್ತು. ಆದರೆ ಸರ್ಕಾರ 60 ಕೋಟಿಗಳನ್ನು ಮಂಜೂರು ಮಾಡಿದೆ ಎಂದು ಹೇಳಿದೆ, ಇದರಿಂದಾಗಿ ವಿವಿಗೆ ದೊಡ್ಡ ಹಣಕಾಸು ಕೊರತೆ ಎದುರಾಗಿದೆ.

ವಿಶ್ವವಿದ್ಯಾನಿಲಯದ ಹಣಕಾಸು ಅಧಿಕಾರಿಗೆ ಬರೆದ ಪತ್ರಕ್ಕೆ ಉತ್ತರಿಸಿರುವ ರಾಜ್ಯ ಸರ್ಕಾರ, ಒಂಬತ್ತು ವಿಶ್ವವಿದ್ಯಾಲಯಗಳಿಗೆ 12.50 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ ಎಂದು ಹೇಳಿದೆ, ಅದರಲ್ಲಿ 4.44 ಕೋಟಿ ರೂ.ಗಳು ಮೈಸೂರು ವಿಶ್ವವಿದ್ಯಾಲಯಕ್ಕಾಗಿ ನಿಗದಿ ಪಡಿಸಲಾಗಿದೆ ಎಂದು ತಿಳಿಸಿದೆ.

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು: ಪಿಂಚಣಿಗಾಗಿ  ನಿವೃತ್ತ ಸಿಬ್ಬಂದಿ ಅಲೆದಾಟ
5 ದಶಕ ಕಳೆದರೂ ಭೂಮಿ ಮಂಜೂರು ಮರೀಚಿಕೆ: ಕಚೇರಿಯಿಂದ ಕಚೇರಿಗೆ ಅಲೆದು ಸಾಕಾದ ಮಾಜಿ ಸೈನಿಕನ ವಿಧವೆ ಪತ್ನಿ; ಅಧಿಕಾರಿಗಳಿಗೆ ಲೋಕಾಯುಕ್ತ ತರಾಟೆ

ಹೆಚ್ಚುವರಿ ಬೋಧಕೇತರ ಸಿಬ್ಬಂದಿ ನೇಮಕಾತಿಯು ಆರ್ಥಿಕ ಅವ್ಯವಸ್ಥೆಗೆ ಒಂದು ಕಾರಣ ಎಂದು ಮೂಲಗಳು ತಿಳಿಸಿವೆ. ಆರ್ಥಿಕ ದುರಾಸೆ ಮತ್ತು ಪಾರದರ್ಶಕತೆಯ ಕೊರತೆಯಿಂದಾಗಿ ಮಾಜಿ ಉಪಕುಲಪತಿಯೊಬ್ಬರು 100 ಕೋಟಿ ರೂ.ಗಳ ಪಿಂಚಣಿ ನಿಧಿಯನ್ನು 'ದುರುಪಯೋಗಪಡಿಸಿಕೊಂಡಿದ್ದು ಬಿಕ್ಕಟ್ಟಿಗೆ ಕಾರಣವಾಯಿತು ಎಂದು ನಿವೃತ್ತ ಶಿಕ್ಷಕ ಜಮೀಲ್ ಅಹ್ಮದ್ ಹೇಳಿದರು. ವಿಶ್ವವಿದ್ಯಾನಿಲಯವು ಪಿಂಚಣಿ ಮತ್ತು ಇತರ ಪ್ರಯೋಜನಗಳ ವಿವರಗಳನ್ನು ನೀಡಬೇಕು ಎಂದು ಹೇಳಿದರು.

ವಿಶ್ವವಿದ್ಯಾನಿಲಯದ ತ್ರಿವಳಿಕರಣವು ಅದರ ಆರ್ಥಿಕ ಸಂಪನ್ಮೂಲಗಳನ್ನು ತೀವ್ರವಾಗಿ ಕಡಿಮೆ ಮಾಡಿದೆ ಎಂದು ಹೇಳಿದರು, ಆದರೆ ರಾಜ್ಯದ ಇತರ ಹಲವಾರು ವಿಶ್ವವಿದ್ಯಾಲಯಗಳು ಸಹ ಇದೇ ರೀತಿಯ ಪರಿಸ್ಥಿತಿಯನ್ನು ಎದುರಿಸುತ್ತಿವೆ. ಸರ್ಕಾರವು ವೇತನಕ್ಕಾಗಿ ಮಾಡುವಂತೆ, ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆಯ ಮೂಲಕ ಪಿಂಚಣಿಗಳನ್ನು ಪಾವತಿಸಬೇಕೆಂದು ಸಲಹೆ ನೀಡಿದರು.

ಈ ಬಿಕ್ಕಟ್ಟಿನಿಂದ ಹೊರಬರಲು ರಾಜ್ಯ ಸರ್ಕಾರವು ಹಣವನ್ನು ಬಿಡುಗಡೆ ಮಾಡುವುದೊಂದೇ ಮಾರ್ಗ ಎಂದು ಮೈಸೂರು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಎನ್.ಕೆ. ಲೋಕನಾಥ್ ಹೇಳಿದರು. ನಾವು ಸರ್ಕಾರದೊಂದಿಗೆ ಸಂವಹನ ನಡೆಸಿದ್ದೇವೆ ಮತ್ತು ಒಂದು ಅಥವಾ ಎರಡು ದಿನಗಳಲ್ಲಿ ಹಣವನ್ನು ಬಿಡುಗಡೆ ಮಾಡಲಾಗುವುದು" ಎಂದು ಅವರು ಹೇಳಿದರು. ವಿಶ್ವವಿದ್ಯಾಲಯದ ಸುಗಮ ಕಾರ್ಯನಿರ್ವಹಣೆ ಮತ್ತು ಪಿಂಚಣಿ ಮತ್ತು ಸಂಬಳ ಪಾವತಿಗಾಗಿ ಸರ್ಕಾರ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com