ಬೆಂಗಳೂರು: ಲಂಚ ಪಡೆಯುತ್ತಿದ್ದಾಗ ಇಬ್ಬರು ಪೊಲೀಸ್ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!

ಕೇಳಿದ್ದ ಹಣದಲ್ಲಿ 1 ಲಕ್ಷ ರೂ. ಪಡೆಯುತ್ತಿದ್ದಾಗ ಶನಿವಾರ ಸಿಕ್ಕಿಬಿದ್ದಿದ್ದು, ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
Representative Image
ಸಂಗ್ರಹ ಚಿತ್ರ
Updated on

ಬೆಂಗಳೂರು: ರಾಮಮೂರ್ತಿ ನಗರ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಅಧಿಕಾರಿಗಳು ಮತ್ತು ಒಬ್ಬ ಖಾಸಗಿ ವ್ಯಕ್ತಿ 1 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ಲೋಕಾಯುಕ್ತ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಆರೋಪಿಗಳನ್ನು ಪೊಲೀಸ್ ಇನ್ಸ್‌ಪೆಕ್ಟರ್ ರಾಜಶೇಖರ್ (48), ಸಬ್ ಇನ್ಸ್‌ಪೆಕ್ಟರ್ ರುಮಾನ್ ಪಾಷಾ (32) ಮತ್ತು ದೇವರ ಜೀವನಹಳ್ಳಿಯ ಇಮ್ರಾನ್ ಬಾಬು (32) ಎಂದು ಗುರುತಿಸಲಾಗಿದೆ.

ಕೇಳಿದ್ದ ಹಣದಲ್ಲಿ 1 ಲಕ್ಷ ರೂ. ಪಡೆಯುತ್ತಿದ್ದಾಗ ಶನಿವಾರ ಸಿಕ್ಕಿಬಿದ್ದಿದ್ದು, ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

ಕೆಆರ್ ಪುರಂ ನಿವಾಸಿ ಮಂಜುನಾಥ್ (47) ಎಂಬುವವರು ಲೋಕಾಯುಕ್ತ ಅಧಿಕಾರಿಗಳನ್ನು ಸಂಪರ್ಕಿಸಿ, ಆಭರಣ ಮತ್ತು ನಗದು ಕಾಣೆಯಾದ ಬಗ್ಗೆ ಮನೆ ವಿವಾದಕ್ಕೆ ಸಂಬಂಧಿಸಿದ ದೂರಿನ ತನಿಖೆಗಾಗಿ ಆರೋಪಿಗಳು 2 ಲಕ್ಷ ರೂ. ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

Representative Image
ಆರೋಪಿ ಬಚಾವ್ ಮಾಡಲು ಲಂಚ: ಗೋವಿಂದಪುರ ಮಹಿಳಾ PSI ಲೋಕಾಯುಕ್ತ ಬಲೆಗೆ!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com