ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ; ಉತ್ತರ ಪ್ರದೇಶದ ಮಾಜಿ ಶಾಸಕನ ವಿರುದ್ಧ ಪ್ರಕರಣ ದಾಖಲು

ದೂರಿನ ಆಧಾರದ ಮೇಲೆ, ಆಗಸ್ಟ್ 17 ರಂದು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 69ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.
Shri Bhagwan Sharma alias Guddu Pandit
ಶ್ರೀ ಭಗವಾನ್ ಶರ್ಮಾ
Updated on

ಬೆಂಗಳೂರು: ಉತ್ತರ ಪ್ರದೇಶದ ಮಾಜಿ ಶಾಸಕ ಶ್ರೀ ಭಗವಾನ್ ಶರ್ಮಾ ಅಲಿಯಾಸ್ ಗುಡ್ಡು ಪಂಡಿತ್ ವಿರುದ್ಧ 40 ವರ್ಷದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಜೀವ ಬೆದರಿಕೆಯೊಡ್ಡಿದ' ಆರೋಪ ಕೇಳಿಬಂದಿದ್ದು, ಅವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ದೂರಿನ ಪ್ರಕಾರ, ಮಾಜಿ ಶಾಸಕರ ಒತ್ತಾಯದ ಮೇರೆಗೆ ಮಹಿಳೆ ತನ್ನ ಅಪ್ರಾಪ್ತ ಮಗನೊಂದಿಗೆ ಆಗಸ್ಟ್ 14 ರಂದು ಉತ್ತರ ಪ್ರದೇಶದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು. ಅದೇ ದಿನ, ಶಾಸಕರು ಅವರನ್ನು ನಗರದ ಹಲವಾರು ಸ್ಥಳಗಳಿಗೆ ಕರೆದುಕೊಂಡು ಹೋಗಿದ್ದರು ಎಂದು ಆರೋಪಿಸಲಾಗಿದೆ.

ಆಗಸ್ಟ್ 16 ರಂದು ಮಾಜಿ ಶಾಸಕರು ಅವರನ್ನು ಚಿತ್ರದುರ್ಗಕ್ಕೆ ಕರೆದೊಯ್ದರು ಮತ್ತು ಮರುದಿನ ಹಿಂದಿರುಗುವಾಗ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಪಂಚತಾರಾ ಹೋಟೆಲ್‌ನಲ್ಲಿ ಕೊಠಡಿ ವ್ಯವಸ್ಥೆ ಮಾಡಿದರು ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ಹೋಟೆಲ್ ಕೋಣೆಯೊಳಗೆ, ಆಕೆಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ಸಂಬಂಧಕ್ಕೆ ಒತ್ತಾಯಿಸಿದನು ಮತ್ತು ಆಕೆ ವಿರೋಧಿಸಿದಾಗ ಕೊಲ್ಲುವುದಾಗಿ ಬೆದರಿಕೆ ಹಾಕಿದರು ಎಂದು ಆರೋಪಿಸಲಾಗಿದೆ.

Shri Bhagwan Sharma alias Guddu Pandit
ಎಂಬಿಬಿಎಸ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಬನಾರಸ್ ಹಿಂದೂ ವಿವಿಯ 3 ಮಾಜಿ ವಿದ್ಯಾರ್ಥಿಗಳ ಬಂಧನ

ದೂರಿನ ಆಧಾರದ ಮೇಲೆ, ಆಗಸ್ಟ್ 17 ರಂದು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 69 (ಮೋಸದಿಂದ ಲೈಂಗಿಕ ಸಂಭೋಗ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com