ವಿಧಾನಸಭೆ ಮುಂಗಾರು ಅಧಿವೇಶನಕ್ಕೆ ತೆರೆ: ಒಟ್ಟು 39 ಮಸೂದೆ ಅಂಗೀಕಾರ

ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಅತಿ ಹೆಚ್ಚು ಅಂದರೆ 39 ವಿಧೇಯಕಗಳನ್ನು ಆಡಳಿತ ಪಕ್ಷ ಮಂಡನೆ ಮಾಡಿ ಅದಕ್ಕೆ ಅನುಮೋದನೆ ಪಡೆದಿದ್ದು, ಒಂದು ಇತಿಹಾಸ ಸೃಷ್ಟಿಯಾಗಿದೆ.
ಯುಟಿ ಖಾದರ್
ಯುಟಿ ಖಾದರ್
Updated on

ಬೆಂಗಳೂರು: ಎರಡು ವಾರಗಳ ಕಾಲ ನಡೆದ ವಿಧಾನಸಭೆಯ ಮುಂಗಾರು ಅಧಿವೇಶನಕ್ಕೆ ಶುಕ್ರವಾರ ಅಧಿಕೃತವಾಗಿ ತೆರೆ ಬಿದಿದ್ದು, ಪ್ರತಿಪಕ್ಷಗಳ ವಿರೋಧದ ನಡವೆಯೇ ಒಟ್ಟು 39 ಮಸೂದೆಗಳನ್ನು ಅಂಗೀಕರಿಸಲಾಗಿದೆ.

ಈ ಬಗ್ಗೆ ಅಧಿವೇಶನದ ಸಮಾರೋಪದ ವೇಳೆ ಮಾಹಿತಿ ನೀಡಿರುವ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್ ಅವರು, ಕಳೆದ 9 ದಿನಗಳಲ್ಲಿ ಒಟ್ಟು 70 ಗಂಟೆಗಳ ಕಾಲ ಅಧಿವೇಶನ ನಡೆಸಲಾಗಿದೆ ಎಂದು ಹೇಳಿದ್ದಾರೆ.

ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಅತಿ ಹೆಚ್ಚು ಅಂದರೆ 39 ವಿಧೇಯಕಗಳನ್ನು ಆಡಳಿತ ಪಕ್ಷ ಮಂಡನೆ ಮಾಡಿ ಅದಕ್ಕೆ ಅನುಮೋದನೆ ಪಡೆದಿದ್ದು, ಒಂದು ಇತಿಹಾಸ ಸೃಷ್ಟಿಯಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಮಸೂದೆಗಳ ಮಂಡನೆ ಮಾಡಿ, ಅನುಮೋದನೆ ನೀಡಲಾಗಿದೆ. ಇದಕ್ಕೆ ಸಹಕರಿಸಿದ ಎಲ್ಲ ಆಡಳಿತ ಮತ್ತು ವಿಪಕ್ಷಗಳ ಶಾಸಕರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಸ್ಪೀಕರ್ ತಿಳಿಸಿದ್ದಾರೆ.

ಯುಟಿ ಖಾದರ್
ವಿಧಾನ ಪರಿಷತ್‌: ತಿದ್ದುಪಡಿಗಳೊಂದಿಗೆ ಭೂ ಸುಧಾರಣಾ ಮಸೂದೆ ಅಂಗೀಕಾರ

ಈ ಮೊದಲು ಅಧಿವೇಶನಗಳಲ್ಲಿ ಸುಮಾರು 20 ವಿಧೇಯಕಗಳ ಮಂಡನೆಯಾಗುತ್ತಿದ್ದವು. ಆದರೆ ಈ ಬಾರಿಯ ಅಧಿವೇಶನ‌‌ದ‌ಲ್ಲಿ ಅದಕ್ಕೂ ಎರಡು ಪಟ್ಟು ವಿಧೇಯಕಗಳ ಮಂಡನೆ ಮಾಡಿ ಅವುಗಳಿಗೆ ಅನುಮೋದನೆ ಪಡೆದದ್ದು ದಾಖಲೆಯಾಗಿದೆ.

ಮುಂಗಾರು ಅಧಿವೇಶನದಲ್ಲಿ ಒಟ್ಟು 2,306 ಪ್ರಶ್ನೆಗಳು ಸ್ವೀಕೃತವಾಗಿದ್ದು, ಈ ಪೈಕಿ 2,199 ಪ್ರಶ್ನೆಗಳನ್ನು ಅಂಗೀಕರಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com