
ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಆರೋಪ ಎದುರಿಸುತ್ತಿ YouTuber ಎಂಡಿ ಸಮೀರ್ (MD Sameer) ಗೆ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ವಿಷಯದ ಕುರಿತು ಸಮೀರ್ ಕ್ರಿಮಿನಲ್ ಆರೋಪದಲ್ಲಿ ನಿರೀಕ್ಷಣಾ ಜಾಮೀನು ಪಡೆದಿರುವ ಸಮೀರ್ ಇದೀಗ ವಿಶೇಷ ತನಿಖಾ ತಂಡದ (ಎಸ್ಐಟಿ) ಪರಿಶೀಲನೆಯಲ್ಲಿದ್ದು ವಿಚಾರಣೆ ಭೀತಿ ಎದುರಿಸುತ್ತಿದ್ದಾರೆ.
ಈಗಾಗಲೇ ಎಂ.ಡಿ. ಸಮೀರ್ ಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ಆಗಸ್ಟ್ 24 ರಂದು ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ಸೂಚಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಆಗಸ್ಟ್ 21 ರಂದು ಮಂಗಳೂರು ನ್ಯಾಯಾಲಯವು ಸಮೀರ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದ ನಂತರ ಬಳ್ಳಾರಿಯಲ್ಲಿರುವ ಅವರ ನಿವಾಸದಲ್ಲಿ ಅಂಟಿಸಲಾದ ನೋಟಿಸ್ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ವಿಷಯದ ಕುರಿತು ಸಮೀರ್ ಕ್ರಿಮಿನಲ್ ಆರೋಪ ಎದುರಿಸುತ್ತಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 192 (ಗಲಭೆಯನ್ನು ಉಂಟುಮಾಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಪ್ರಚೋದನೆ ನೀಡುವುದು), 240 (ಸುಳ್ಳು ಮಾಹಿತಿ ನೀಡುವುದು) ಮತ್ತು 353(1)(ಬಿ) (ಸಾರ್ವಜನಿಕ ಕಿರುಕುಳಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪೊಲೀಸರ ಪ್ರಕಾರ, ಸಮೀರ್ ಪ್ರಕರಣಕ್ಕೆ ಸಂಬಂಧಿಸಿದ ಆರೋಪಗಳನ್ನು ಮಾಡಿರುವ ವೀಡಿಯೊವನ್ನು ಅಪ್ಲೋಡ್ ಮಾಡಿದ್ದಾರೆ. ಹಾಲಿ ನಡೆಯುತ್ತಿರುವ ತನಿಖೆಯ ಭಾಗವಾಗಿ ಎಸ್ಐಟಿ ಅವರ ಪಾತ್ರವನ್ನು ಸಹ ಪರಿಶೀಲಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಂತೆಯೇ ಆನ್ಲೈನ್ನಲ್ಲಿ ಗಣನೀಯ ಸಂಖ್ಯೆಯ ಅನುಯಾಯಿಗಳನ್ನು ಹೊಂದಿರುವ ಸಮೀರ್, ತಮ್ಮ ವೀಡಿಯೊಗಳು ಮುಖ್ಯವಾಹಿನಿಯ ಮಾಧ್ಯಮಗಳು ನಿರ್ಲಕ್ಷಿಸಿರುವ ವಿಷಯಗಳನ್ನು ಎತ್ತಿ ತೋರಿಸುತ್ತವೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಆದಾಗ್ಯೂ, ಅಧಿಕಾರಿಗಳು ಅವರ ಇತ್ತೀಚಿನ ವಿಷಯವು ಪ್ರಚೋದನೆ ಮತ್ತು ತಪ್ಪು ಮಾಹಿತಿಯ ಹರಡುವಿಕೆಗೆ ಕಾರಣವಾಗಿದ್ದು, ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ ಸಾಧ್ಯತೆಯಿದೆ ಎಂದು ಆರೋಪಿಸಿದ್ದಾರೆ. ಹೀಗಾಗಿ ಯಾವುದೇ ಕ್ಷಣದಲ್ಲೂ ಎಂಡಿ ಸಮೀರ್ ನನ್ನು ಪೊಲೀಸರು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಕೋರ್ಟ್ ಸೂಚನೆ
ಇನ್ನು ನಿರೀಕ್ಷಣಾ ಜಾಮೀನು ನೀಡುವಾಗ, ನ್ಯಾಯಾಲಯವು ಸಮೀರ್ ತನಿಖೆಗೆ ಸಹಕರಿಸಲು ಮತ್ತು "ಪ್ರಚೋದನಕಾರಿ ಹೇಳಿಕೆ"ಗಳನ್ನುನೀಡದಂತೆ ಸೂಚಿಸಿದೆ.
ಕಳೆದ ಎರಡು ದಶಕಗಳಲ್ಲಿ ಧರ್ಮಸ್ಥಳದಲ್ಲಿ ಅನೇಕ ಕೊಲೆಗಳು, ಅತ್ಯಾಚಾರಗಳು ಮತ್ತು ಸಮಾಧಿಗಳನ್ನು ಆರೋಪಿಸಿದ್ದ ದೂರುದಾರರನ್ನು ಆರೋಪಗಳ ತನಿಖೆ ನಡೆಸುತ್ತಿರುವ ಎಸ್ಐಟಿ ಶನಿವಾರ ಬಂಧಿಸಿದೆ.
ಇಲ್ಲಿಯವರೆಗೆ ಮುಖವಾಡ ಧರಿಸಿ ತನಿಖಾ ಸಮಿತಿಯ ಮುಂದೆ ಹಾಜರಾಗಿದ್ದ ದೂರುದಾರರನ್ನು ಸಿ ಎನ್ ಚಿನ್ನಯ್ಯ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಾಜಿ ನೈರ್ಮಲ್ಯ ಕಾರ್ಮಿಕ ಚಿನ್ನಯ್ಯ, 1995 ಮತ್ತು 2014 ರ ನಡುವೆ ಧರ್ಮಸ್ಥಳದಲ್ಲಿ ಕೆಲಸ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದರು. ಈ ಸಮಯದಲ್ಲಿ ಮಹಿಳೆಯರು ಮತ್ತು ಅಪ್ರಾಪ್ತ ವಯಸ್ಕರ ಶವಗಳನ್ನು ಒಳಗೊಂಡಂತೆ ಹಲವಾರು ಶವಗಳನ್ನು ಹೂಳಲು ಅವರನ್ನು ಒತ್ತಾಯಿಸಲಾಯಿತು ಎಂದು ಆರೋಪಿಸಲಾಗಿದೆ.
ಕೆಲವು ಸಂತ್ರಸ್ಥರ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಲಕ್ಷಣಗಳು ಕಂಡುಬಂದಿತ್ತು ಎಂದು ಆತ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement