ರೇಣುಕಾಸ್ವಾಮಿ ಕೊಲೆ ಪ್ರಕರಣ: ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಏಳು ಆರೋಪಿಗಳ ವಿಚಾರಣೆ!

ದರ್ಶನ್ ಮತ್ತಿತರರನ್ನು ರಾಜ್ಯದ ವಿವಿಧ ಕಾರಾಗೃಹಗಳಿಗೆ ಸ್ಥಳಾಂತರಿಸಬೇಕೆಂದು ಪ್ರಾಸಿಕ್ಯೂಷನ್ ಪರ ವಕೀಲರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಡೆಸಿತು.
Accused Darshan And Pavithra Gowda
ಆರೋಪಿಗಳಾದ ದರ್ಶನ್ ಮತ್ತು ಪವಿತ್ರಗೌಡ
Updated on

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ ಏಳು ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಶನಿವಾರ ವಿಚಾರಣೆಗೆ ಹಾಜರಾದರು.

ದರ್ಶನ್ ಮತ್ತಿತರರನ್ನು ರಾಜ್ಯದ ವಿವಿಧ ಕಾರಾಗೃಹಗಳಿಗೆ ಸ್ಥಳಾಂತರಿಸಬೇಕೆಂದು ಪ್ರಾಸಿಕ್ಯೂಷನ್ ಪರ ವಕೀಲರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಉನ್ನತ ನ್ಯಾಯಾಲಯ ನಡೆಸಿತು.

ಆರೋಪಿ ಪ್ರದೂಷ್ ರಾವ್ ಆಕ್ಷೇಪಣಾ ಅರ್ಜಿ ಸಲ್ಲಿಸಿದರೆ, ಉಳಿದ ಆರೋಪಿಗಳು ತಕರಾರರು ಅರ್ಜಿ ಸಲ್ಲಿಸಲು ಕಾಲಾವಕಾಶ ಕೇಳಿ ನ್ಯಾಯಾಲಯಕ್ಕೆ ಮನವಿ ಮಾಡಿದರು. ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಿದ ನ್ಯಾಯಾಲಯ, ಆಗಸ್ಟ್ 30ಕ್ಕೆ ವಿಚಾರಣೆ ಮುಂದೂಡಿತು.

Accused Darshan And Pavithra Gowda
ಪರಪ್ಪನ ಅಗ್ರಹಾರದ ಜೈಲಿನಲ್ಲಿ ಪವಿತ್ರ ಗೌಡ, ನಟ ದರ್ಶನ್: ವಿಚಾರಣಾಧೀನ ಕೈದಿ ನಂಬರ್ ಎಷ್ಟು ಗೊತ್ತಾ?

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com