ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

ನಾಡ ಹಬ್ಬ ಹಿಂದೂ ಸಂಸ್ಕೃತಿಯ ಒಂದು ಭಾಗವಾಗಿದೆ. ಸಮಾಜದ ಎಲ್ಲಾ ವರ್ಗಗಳು ಇದನ್ನು ವಾರ್ಷಿಕ ಹಬ್ಬವಾಗಿ ಆನಂದಿಸುತ್ತವೆ. ಲಕ್ಷಾಂತರ ಜನರು ಭಾಗವಹಿಸುವ ದಸರಾದ ಬಗ್ಗೆ ನನಗೆ ಹೆಚ್ಚಿನ ಗೌರವವಿದೆ. ದಸರಾ ಉತ್ಸವದ ಪ್ರಮುಖ ದೇವತೆ ಚಾಮುಂಡೇಶ್ವರಿ ದೇವಿಯ ಬಗ್ಗೆ ನನಗೆ ಗೌರವವಿದೆ.
Banu Mushtaq
ಬಾನು ಮುಷ್ತಾಕ್
Updated on

ಹಾಸನ: ದಸರಾ ಉತ್ಸವವನ್ನು ಉದ್ಘಾಟಿಸಲು ರಾಜ್ಯ ಸರ್ಕಾರವು ತಮ್ಮನ್ನು ಆಹ್ವಾನಿಸಿದ್ದಕ್ಕೆ ಸಂತೋಷ ವ್ಯಕ್ತಪಡಿಸಿದ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು, ಈ ಗೌರವವನ್ನು ಪ್ರೀತಿಯಿಂದ ಸ್ವೀಕರಿಸುತ್ತೇನೆಂದು ಹೇಳಿದ್ದಾರೆ.

ರಾಜ್ಯದ ಸಂಸ್ಕೃತಿ, ಸಂಪ್ರದಾಯ ಮತ್ತು ಕಲೆಯನ್ನು ಶ್ರೀಮಂತಗೊಳಿಸುವ ನಾಡ ಹಬ್ಬವನ್ನು ಉದ್ಘಾಟಿಸುವ ದೊಡ್ಡ ಜವಾಬ್ದಾರಿಯನ್ನು ರಾಜ್ಯ ಸರ್ಕಾರ ನನಗೆ ನೀಡಿದೆ. ಇದನ್ನು ಪ್ರೀತಿಯಿಂದ ಸ್ವೀಕರಿಸುತ್ತೇನೆಂದು ಹೇಳಿದ್ದಾರೆ.

ನಾಡ ಹಬ್ಬ ಹಿಂದೂ ಸಂಸ್ಕೃತಿಯ ಒಂದು ಭಾಗವಾಗಿದೆ. ಸಮಾಜದ ಎಲ್ಲಾ ವರ್ಗಗಳು ಇದನ್ನು ವಾರ್ಷಿಕ ಹಬ್ಬವಾಗಿ ಆನಂದಿಸುತ್ತವೆ. ಲಕ್ಷಾಂತರ ಜನರು ಭಾಗವಹಿಸುವ ದಸರಾದ ಬಗ್ಗೆ ನನಗೆ ಹೆಚ್ಚಿನ ಗೌರವವಿದೆ. ದಸರಾ ಉತ್ಸವದ ಪ್ರಮುಖ ದೇವತೆ ಚಾಮುಂಡೇಶ್ವರಿ ದೇವಿಯ ಬಗ್ಗೆ ನನಗೆ ಗೌರವವಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ತಾವು ಮಗುವಾಗಿದ್ದಾಗ ಪೋಷಕರೊಂದಿಗೆ ಜಂಬೂ ಸವಾರಿ ವೀಕ್ಷಿಸಿದ್ದ ಸಂದರ್ಭವನ್ನೂ ಬಾನು ಮುಷ್ತಾಕ್ ಅವರು ಸ್ಮರಿಸಿದ್ದಾರೆ.

ಬಾನು ಮುಷ್ತಾಕ್‌ಗೆ ನೀಡಿದ ಆಹ್ವಾನ ಮತ್ತು ವಿರೋಧ ಪಕ್ಷಗಳ ಆಕ್ಷೇಪಣೆ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು, ದಸರಾ ಧರ್ಮ ಮತ್ತು ಜಾತಿಗಿಂತ ಮೀರಿದ್ದು ಎಂದು ಹೇಳಿದ್ದಾರೆ.

ಈ ಉತ್ಸವವನ್ನು ಹಿಂದೆ ಕವಿ ನಿಸಾರ್ ಅಹ್ಮದ್ ಉದ್ಘಾಟಿಸಿದ್ದರು ಮತ್ತು ದಿವಾನ್ ಸರ್ ಮಿರ್ಜಾ ಇಸ್ಮಾಯಿಲ್ ಅವರ ನೇತೃತ್ವದಲ್ಲಿ ಆಚರಣೆಗಳು ನಡೆದಿವೆ. ಇದು ಎಲ್ಲರೂ ಆಚರಿಸುವ ಹಬ್ಬವಾಗಿದೆ ಎಂದು ತಿಳಿಸಿದ್ದಾರೆ.

Banu Mushtaq
ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com