ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ 50 ರಿಯಾಯಿತಿ: ₹2.65 ಕಳೆದುಕೊಂಡ ಸಾಫ್ಟ್‌ವೇರ್ ಎಂಜಿನಿಯರ್

ದೂರಿನ ಆಧಾರದ ಮೇಲೆ ಹಣದ ಜಾಡನ್ನು ಪತ್ತೆಹಚ್ಚಲಾಗುತ್ತಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Representative Image
ಪ್ರಾತಿನಿಧಿಕ ಚಿತ್ರ
Updated on

ಬೆಂಗಳೂರು: ಬೆಂಗಳೂರು ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಶೇ 50ರ ರಿಯಾಯಿತಿ ನೀಡಿ ದಂಡ ಪಾವತಿಸಲು ಅವಕಾಶ ಕಲ್ಪಿಸಲಾಗಿದ್ದು, ಸೈಬರ್ ಅಪರಾಧಿಗಳು ಇದನ್ನೇ ಆಯುಧವನ್ನಾಗಿ ಮಾಡಿಕೊಂಡು ಸಾರ್ವಜನಿಕರನ್ನು ವಂಚಿಸುತ್ತಿದ್ದಾರೆ.

ಸೈಬರ್ ವಂಚಕರು ದಂಡವನ್ನು ಪರಿಶೀಲಿಸಲು ಮತ್ತು ಪಾವತಿಸಲು ಸಹಾಯ ಮಾಡುವುದಾಗಿ ಹೇಳುವ ಎಪಿಕೆ ಫೈಲ್ ಲಿಂಕ್‌ ಅನ್ನು ವಾಟ್ಸಾಪ್‌ಗೆ ಕಳುಹಿಸುವ ಮೂಲಕ ಹಣವನ್ನು ದೋಚಿರುವುದು ವರದಿಯಾಗಿದೆ.

ಇತ್ತೀಚೆಗೆ, 50 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬರು ಆನ್‌ಲೈನ್‌ನಲ್ಲಿ ಸಂಚಾರ ಉಲ್ಲಂಘನೆ ಶುಲ್ಕವನ್ನು ಪಾವತಿಸಲು ಲಿಂಕ್ ಎಂದು ನಂಬಿ ವಾಟ್ಸಾಪ್ ಮೂಲಕ ಕಳುಹಿಸಲಾದ ಎಪಿಕೆ ಫೈಲ್ ಅನ್ನು ಕ್ಲಿಕ್ ಮಾಡಿದ್ದಾರೆ. ಆಗ 2.65 ಲಕ್ಷ ರೂ.ಗಳನ್ನು ಕಳೆದುಕೊಂಡಿದ್ದಾರೆ.

ಟೆಲಿಕಾಂ ಲೇಔಟ್ ನಿವಾಸಿ ಮುರಳಿ ಮೋಹನ್ ಶನಿವಾರ ಸರ್ಕಾರಿ ವೆಬ್‌ಸೈಟ್‌ನಲ್ಲಿ ತಮ್ಮ ವಾಹನದ ಮೇಲೆ ಸಂಚಾರ ದಂಡಗಳಿವೆಯೇ ಎಂದು ಪರಿಶೀಲಿಸಿದ್ದಾರೆ. ಅದಾದ ಸ್ವಲ್ಪ ಸಮಯದ ನಂತರ, ಅವರಿಗೆ ಅವಪರಿಚಿತ ಸಂಖ್ಯೆಯಿಂದ APK ಲಿಂಕ್ ಹೊಂದಿರುವ ವಾಟ್ಸಾಪ್ ಸಂದೇಶ ಬಂದಿದೆ. ದಂಡ ಪಾವತಿಸಲು ಅದನ್ನು ಡೌನ್‌ಲೋಡ್ ಮಾಡುವಂತೆ ಸೂಚಿಸಲಾಗಿತ್ತು. ಅದನ್ನು ನಿಜವೆಂದು ನಂಬಿ, ಫೈಲ್ ಅನ್ನು ಕ್ಲಿಕ್ ಮಾಡಿದ ಕೂಡಲೇ ಅವರ ಫೋನ್ ಹ್ಯಾಕ್ ಆಗಿದೆ. ಅದಾದ ಕೆಲವೇ ನಿಮಿಷಗಳಲ್ಲಿ, ಅವರ ಖಾತೆಯಿಂದ 2,65,979 ರೂ.ಗಳನ್ನು ದೋಚಲಾಗಿದೆ ಎಂದು ಕೊಡಿಗೇಹಳ್ಳಿ ಪೊಲೀಸರು ತಿಳಿಸಿದ್ದಾರೆ.

Representative Image
ಮೆಸೇಜಿಂಗ್ ಆ್ಯಪ್ ಮೂಲಕ ಆನ್‌ಲೈನ್ ವಂಚನೆ; ವ್ಯಕ್ತಿಯೊಬ್ಬರಿಂದ 15.5 ಲಕ್ಷ ರೂ ದೋಚಿದ ದುಷ್ಕರ್ಮಿ

ದೂರಿನ ಆಧಾರದ ಮೇಲೆ ಹಣದ ಜಾಡನ್ನು ಪತ್ತೆಹಚ್ಚಲಾಗುತ್ತಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪರಿಚಿತ ವ್ಯಕ್ತಿಗಳು ಕಳುಹಿಸಿದ ಯಾವುದೇ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಬೇಡಿ ಎಂದು ಪೊಲೀಸರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com