
ಮಂಗಳೂರು: ಕಾಸರಗೋಡಿನಿಂದ ಮಂಗಳೂರಿಗೆ ಹೋಗುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KSRTC)ಯ ಬಸ್ ಗುರುವಾರ ಬ್ರೇಕ್ ಫೇಲ್ ಆಗಿ ರಸ್ತೆ ಬದಿ ನಿಂತಿದ್ದ ವ್ಯಕ್ತಿಗಳಿಗೆ ಮತ್ತು ಆಟೋಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಜನ ಮೃತಪಟ್ಟಿದ್ದಾರೆ.
ಇಂದು ಮಧ್ಯಾಹ್ನ 1.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಬ್ರೇಕ್ ಫೇಲ್ ಆಗಿದ್ದರಿಂದ ಬಸ್, ಚಾಲಕನ ನಿಯಂತ್ರಣ ತಪ್ಪಿ, ಹಿಂದಕ್ಕೆ ಬಂದು ಬಸ್ ನಿಲ್ದಾಣದಲ್ಲಿ ನಿಂತಿದ್ದ ವ್ಯಕ್ತಿಗಳಿಗೆ ಹಾಗೂ ಆಟೋಗೆ ಡಿಕ್ಕಿ ಹೊಡೆದಿದೆ.
ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಮಹಿಳೆಯರು, ಇಬ್ಬರು ಪುರುಷರು ಹಾಗೂ ಮಗು ಸೇರಿದಂತೆ ಆರು ಜನ ಸಾವನ್ನಪ್ಪಿದ್ದಾರೆ.
ಇದಲ್ಲದೆ, ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೇರಳದ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Advertisement