ಗಣೇಶ ವಿಸರ್ಜನೆ ವೇಳೆ ವ್ಯಕ್ತಿ ಸಾವು (ಸಾಂದರ್ಭಿಕ ಚಿತ್ರ)
ಗಣೇಶ ವಿಸರ್ಜನೆ ವೇಳೆ ವ್ಯಕ್ತಿ ಸಾವು (ಸಾಂದರ್ಭಿಕ ಚಿತ್ರ)

ಮಂಡ್ಯ: ಬೇಲೂರು ಕೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಯುವಕ ಸಾವು

"ರಾತ್ರಿ ವೇಳೆ ಯುವಕರು ಬೇಲೂರು ಕೆರೆಯಲ್ಲಿ ಗಣೇಶ ವಿಸರ್ಜನೆ ಮಾಡುತ್ತಿದ್ದರು. ಈ ಸಮಯದಲ್ಲಿ, ಯುವಕರೊಂದಿಗೆ ನೀರಿಗೆ ಇಳಿದಿದ್ದ ಪ್ರದೀಪ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
Published on

ಮಂಡ್ಯ: ಮಂಡ್ಯ ಜಿಲ್ಲೆಯ ಬೇಲೂರು ಕೆರೆಯಲ್ಲಿ ಗಣೇಶ ವಿಸರ್ಜನೆಯ ಸಂದರ್ಭದಲ್ಲಿ 28 ವರ್ಷದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮೃತ ವ್ಯಕ್ತಿಯನ್ನು ಮಂಡ್ಯದ ಯರಹಳ್ಳಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಯುವಕರ ಗುಂಪೊಂದು ತಡರಾತ್ರಿ ಗಣೇಶ ವಿಸರ್ಜನೆ ಮಾಡುತ್ತಿದ್ದ ಸಮಯದಲ್ಲಿ ಈ ಘಟನೆ ಸಂಭವಿಸಿದೆ ಎಂದು ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ತಿಳಿಸಿದ್ದಾರೆ.

"ರಾತ್ರಿ ವೇಳೆ ಯುವಕರು ಬೇಲೂರು ಕೆರೆಯಲ್ಲಿ ಗಣೇಶ ವಿಸರ್ಜನೆ ಮಾಡುತ್ತಿದ್ದರು. ಈ ಸಮಯದಲ್ಲಿ, ಯುವಕರೊಂದಿಗೆ ನೀರಿಗೆ ಇಳಿದಿದ್ದ ಪ್ರದೀಪ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಪ್ರದೀಪ್ ಮದ್ಯ ಸೇವಿಸಿ ನೀರಿಗೆ ಇಳಿದಿದ್ದರು ಎಂದು ಶಂಕಿಸಲಾಗಿದೆ" ಎಂದು ಎಸ್ಪಿ ಹೇಳಿದ್ದಾರೆ.

ಗಣೇಶ ವಿಸರ್ಜನೆ ವೇಳೆ ವ್ಯಕ್ತಿ ಸಾವು (ಸಾಂದರ್ಭಿಕ ಚಿತ್ರ)
ಕೊಪ್ಪಳ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಓರ್ವ ಯುವಕನಿಗೆ ಚಾಕು ಇರಿತ, ಮೂವರ ಮೇಲೆ ಹಲ್ಲೆ

"ಅಗ್ನಿಶಾಮಕ ದಳದ ಸಿಬ್ಬಂದಿ ಪ್ರದೀಪ್ ಮೃತದೇಹವನ್ನು ಹೊರತೆಗೆದಿದ್ದು, ಈ ಸಂಬಂಧ ಮಂಡ್ಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ" ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com