Dharmasthala case: ಬಂಧಿತ ಸಾಕ್ಷಿ-ದೂರುದಾರ ಚಿನ್ನಯ್ಯನನ್ನು ಸ್ಥಳ ಮಹಜರಿಗೆ ಕರೆದೊಯ್ದ SIT

ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಎಸ್‌ಐಟಿ ತಂಡವು ಅವರು ನೀಡಿರುವ ಹೇಳಿಕೆಯಲ್ಲಿ ತಿಳಿಸಿರುವ ಸ್ಥಳಗಳಲ್ಲಿ ಮಹಜರು ನಡೆಸಲು ಬಿಗಿ ಭದ್ರತೆಯಲ್ಲಿ ಚಿನ್ನಯ್ಯ ಅವರನ್ನು ಕರೆದೊಯ್ದಿದೆ.
Arrested witness-complainant CN Chinnayya in the Dharmasthala case.
ಬಂಧಿತ ಚಿನ್ನಯ್ಯ
Updated on

ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಕ್ರಿಯೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT), ಶನಿವಾರ ಬಂಧಿತ ಸಾಕ್ಷಿ-ದೂರುದಾರ ಚಿನ್ನಯ್ಯನನ್ನು ಸ್ಥಳ ಮಹಜರಿಗಾಗಿ ಅಜ್ಞಾತ ಸ್ಥಳಗಳಿಗೆ ಕರೆದೊಯ್ದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಜಿಲ್ಲಾ ಪೊಲೀಸ್ ಮೂಲಗಳಿಂದ ಲಭ್ಯವಿರುವ ಮಾಹಿತಿ ಪ್ರಕಾರ, ಚಿನ್ನಯ್ಯ ಅವರನ್ನು ಬೆಂಗಳೂರಿಗೆ ಕರೆದೊಯ್ಯಲಾಗುತ್ತಿದೆ. ಅಲ್ಲಿ ಅವರಿಗೆ ಮಾನವ ತಲೆಬುರುಡೆ ಸಿಕ್ಕಿದೆ ಎನ್ನಲಾಗಿದೆ. ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಎಸ್‌ಐಟಿ ತಂಡವು ಅವರು ನೀಡಿರುವ ಹೇಳಿಕೆಯಲ್ಲಿ ತಿಳಿಸಿರುವ ಸ್ಥಳಗಳಲ್ಲಿ ಮಹಜರು ನಡೆಸಲು ಬಿಗಿ ಭದ್ರತೆಯಲ್ಲಿ ಚಿನ್ನಯ್ಯ ಅವರನ್ನು ಕರೆದೊಯ್ದಿದೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯದ ಮನೆಯೊಂದರಲ್ಲಿ ಸ್ಥಳ ಮಹಜರಿಗಾಗಿ ಆರೋಪಿಯನ್ನು ನಗರಕ್ಕೆ ಕರೆತರಲಾಗುತ್ತಿದೆ. ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಭದ್ರತೆಗೆ ಮನವಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಆದಾಗ್ಯೂ, ಚಿನ್ನಯ್ಯನನ್ನು ನಿಖರವಾಗಿ ಎಲ್ಲಿಗೆ ಕರೆದೊಯ್ಯಲಾಯಿತು ಎಂಬುದರ ಕುರಿತು ಯಾವುದೇ ಅಧಿಕೃತ ಮಾಹಿತಿ ಇಲ್ಲ.

'ಭದ್ರತೆಯ ದೃಷ್ಟಿಯಿಂದ ಈ ಪ್ರಕ್ರಿಯೆಯನ್ನು ಬೆಳಗಿನ ಜಾವ ನಡೆಸಲಾಯಿತು. ಭೇಟಿ ನೀಡಿದ ಸ್ಥಳಗಳು ಮತ್ತು ಪಡೆದುಕೊಂಡ ದಾಖಲೆಗಳ ವಿವರಗಳನ್ನು ಈ ಹಂತದಲ್ಲಿ ಬಹಿರಂಗಪಡಿಸಲು ಆಗುವುದಿಲ್ಲ' ಎಂದು ತನಿಖೆಯ ಪರಿಚಿತ ಮೂಲಗಳು ತಿಳಿಸಿವೆ.

Arrested witness-complainant CN Chinnayya in the Dharmasthala case.
ಸೌಜನ್ಯ ಪ್ರಕರಣ 'ರೀ ಓಪನ್' ಆಗುತ್ತಾ? SIT ಗೆ ಮಂಡ್ಯದ ಸಾಕ್ಷಿದಾರ ಮಹಿಳೆ ಪತ್ರ! ಹೇಳಿರುವುದು ಏನು?

ಸುಳ್ಳು ಸಾಕ್ಷ್ಯಾಧಾರದ ಆರೋಪದ ಮೇಲೆ ಬಂಧಿಸಲ್ಪಟ್ಟ ಸಿಎನ್ ಚಿನ್ನಯ್ಯ ಎಂಬ ದೂರುದಾರನು ಧರ್ಮಸ್ಥಳದಲ್ಲಿ ಲೈಂಗಿಕ ದೌರ್ಜನ್ಯದ ಗುರುತುಗಳನ್ನು ಹೊಂದಿರುವ ಮಹಿಳೆಯರ ಶವಗಳು ಸೇರಿದಂತೆ ಹಲವಾರು ಶವಗಳನ್ನು ಹೂತಿರುವುದಾಗಿ ಹೇಳಿಕೊಂಡ ನಂತರ ವಿವಾದ ಭುಗಿಲೆದ್ದಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com