ಕಾನ್‌ಸ್ಟೆಬಲ್‌ಗೆ ಚಾಕುವಿನಿಂದ ಇರಿದು, ಪರಾರಿಯಾಗಲು ಯತ್ನ; ಆರೋಪಿ ಕಾಲಿಗೆ ಗುಂಡೇಟು

ರಮೇಶ್ ಕಿಲಾರಿ ಎಂದು ಗುರುತಿಸಲಾದ ವ್ಯಕ್ತಿ ಡಕಾಯಿತಿ, ದರೋಡೆ, ಸಾಮೂಹಿಕ ಅತ್ಯಾಚಾರ ಮತ್ತು ಅಕ್ರಮ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಹಲವು ಪ್ರಕರಣಗಳನ್ನು ಎದುರಿಸುತ್ತಿದ್ದಾನೆ.
Representative Image
ಸಂಗ್ರಹ ಚಿತ್ರ
Updated on

ಬೆಳಗಾವಿ: ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ವ್ಯಕ್ತಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಶನಿವಾರ ಬೆಳಿಗ್ಗೆ ಆತ ಕಾನ್‌ಸ್ಟೆಬಲ್ ಮೇಲೆ ಹಲ್ಲೆ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ.

ರಮೇಶ್ ಕಿಲಾರಿ ಎಂದು ಗುರುತಿಸಲಾದ ವ್ಯಕ್ತಿ ಡಕಾಯಿತಿ, ದರೋಡೆ, ಸಾಮೂಹಿಕ ಅತ್ಯಾಚಾರ ಮತ್ತು ಅಕ್ರಮ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಹಲವು ಪ್ರಕರಣಗಳನ್ನು ಎದುರಿಸುತ್ತಿದ್ದಾನೆ. ಈ ಪ್ರಕರಣಗಳು ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಿಗ್ಗೆ 6 ಗಂಟೆ ಸುಮಾರಿಗೆ ಪೊಲೀಸ್ ತಂಡವೊಂದು ಆತನನ್ನು ಬಂಧಿಸಲು ತೆರಳಿದಾಗ, ಕಿಲಾರಿ ಕಾನ್‌ಸ್ಟೆಬಲ್ ಷರೀಫ್ ದಫೇದಾರ್ ಅವರನ್ನು ಚಾಕುವಿನಿಂದ ಇರಿದು ಮತ್ತು ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ.

ಪಿಎಸ್ಐ ಪ್ರವೀಣ್ ಗೊಂಗೊಳ್ಳಿ ಆರಂಭದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಆದರೆ, ಆರೋಪಿ ಅದನ್ನು ನಿರ್ಲಕ್ಷಿಸಿ ಓಡುತ್ತಿದ್ದನು. ನಂತರ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ, ಬಂಧಿಸಿದ್ದಾರೆ.

ಕಿಲಾರಿ ದೀರ್ಘ ಕ್ರಿಮಿನಲ್ ಹಿನ್ನೆಲೆಯನ್ನು ಹೊಂದಿದ್ದು, ಹಲವಾರು ಗಂಭೀರ ಅಪರಾಧಗಳಲ್ಲಿ ಭಾಗಿಯಾಗಿದ್ದ ಎಂದು ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡ ಕಾನ್‌ಸ್ಟೆಬಲ್ ಮತ್ತು ಆರೋಪಿ ಇಬ್ಬರನ್ನೂ ಚಿಕಿತ್ಸೆಗಾಗಿ ಬೆಳಗಾವಿ ಬಿಮ್ಸ್ (BIMS) ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com