ಉಡುಪಿ: ನಾಪತ್ತೆಯಾಗಿದ್ದ ಬೆಂಗಳೂರು ಮಹಿಳೆಯ ಶವ ಸೌಪರ್ಣಿಕಾ ನದಿಯಲ್ಲಿ ಪತ್ತೆ!

ಬೆಂಗಳೂರಿನ ತ್ಯಾಗರಾಜ ನಗರದ ನಿವಾಸಿ 45 ವರ್ಷದ ವಸುಧಾ ಚಕ್ರವರ್ತಿ ಉಡುಪಿಯ ಕೊಲ್ಲೂರಿಗೆ ತೆರಳಿದ್ದರು.
Vasudha Chakravarthy
ವಸುಧಾ ಚಕ್ರವರ್ತಿ
Updated on

ಉಡುಪಿ: ಬೆಂಗಳೂರಿನ ತ್ಯಾಗರಾಜ ನಗರದ ನಿವಾಸಿ 45 ವರ್ಷದ ವಸುಧಾ ಚಕ್ರವರ್ತಿ (Vasudha Chakravarthy) ಉಡುಪಿಯ (Udupi) ಕೊಲ್ಲೂರಿಗೆ ತೆರಳಿದ್ದರು. ಕೊಲ್ಲೂರಿನ ವಸತಿಗೃಹವೊಂದರ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ವಸುಧಾ ಮೃತದೇಹ ಸೌಪರ್ಣಿಕಾ ನದಿಯಲ್ಲಿ ಪತ್ತೆಯಾಗಿದೆ. ಆಗಸ್ಟ್ 27ರಂದು ಕಾರಿನಲ್ಲಿ ಕೊಲ್ಲೂರಿಗೆ ಬಂದಿದ್ದರು. ಇನ್ನು ಕರೆ ಮಾಡಿದಾಗ ಮಗಳು ಕರೆ ಸ್ವೀಕರಿಸಲಿಲ್ಲ ಎಂದು ಆಕೆಯ ತಾಯಿ ಆ. 29ರಂದು ಕೊಲ್ಲೂರಿಗೆ ಬಂದು ದೇವಸ್ಥಾನದ ಸಿಬ್ಬಂದಿಗೆ ವಿಚಾರ ತಿಳಿಸಿದ್ದರು.

ವಸತಿ ಗೃಹದ ಬಳಿ ಅವರ ಕಾರು ಪತ್ತೆಯಾಗಿತ್ತು. ಹೀಗಾಗಿ ಕೊಲ್ಲೂರು ಠಾಣೆಯಲ್ಲಿ ಮಹಿಳೆ ನಾಪತ್ತೆ ಕುರಿತು ಪ್ರಕರಣ ದಾಖಲಿಸಿಕೊಂಡು ಸೌಪರ್ಣಿಕಾ ನದಿ ಪರಿಸರದಲ್ಲಿ ಹುಡುಕಾಟ ನಡೆಸಲಾಗಿತ್ತು. ಇದೀಗ ಎರಡು ದಿನಗಳ ಬಳಿಕ ಮಾವಿನಕಾರು ಎಂಬಲ್ಲಿ ನದಿಯಲ್ಲಿ ಶವ ಪತ್ತೆಯಾಗಿದೆ. ವಸುಧಾ ಅವರು ಈಜು ಪಟುವಾಗಿದ್ದು ವೇಗವಾಗಿ ಹರಿಯುತ್ತಿದ್ದ ಸೌಪರ್ಣಿಕಾ ನದಿಯಲ್ಲಿ ಸ್ನಾನಕ್ಕಿಳಿದ ಸಂದರ್ಭ ನೀರಿನಲ್ಲಿ ಕೊಚ್ಚಿ ಹೋಗಿದ್ದರೇ, ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎಂಬುದು ತಿಳಿದುಬಂದಿಲ್ಲ. ಸ್ಥಳೀಯರು ನದಿಗೆ ಕಾಲು ಜಾರಿ ಬಿದ್ದಿರುವ ಶಂಕೆ ವ್ಯಕ್ತಪಡಿಸಿದ್ದಾರೆ.

Vasudha Chakravarthy
ಬೆಂಗಳೂರು: ಪ್ರಯಾಣಿಕನಿಗೆ ಕಪಾಳಮೋಕ್ಷ ಮಾಡಿದ BMTC ಬಸ್ ಕಂಡಕ್ಟರ್; ನೆಟ್ಟಿಗರು ಆಕ್ರೋಶ, Video!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com